ಬೆಂಗಳೂರು: ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ ಆ್ಯಸಿಡ್ ಎರಚಲಾಗಿದ್ದು, ಪರಿಚಯಸ್ಥನೇ ಕೃತ್ಯ ಎಸಗಿರುವ ಶಂಕೆ ಇದೆ.
ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು, ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಬೆಳಗಾವಿ: ನಡುರಸ್ತೆಯಲ್ಲಿ ನೂಪುರ್ ಪ್ರತಿಕೃತಿ ಗಲ್ಲಿಗೇರಿಸಿದ ಅಣಕು
'ಮಹಿಳೆ ಜೊತೆ ವೈಮನಸ್ಸು ಹೊಂದಿದ್ದ ಅಹ್ಮದ್ ಎಂಬಾತ, ಆ್ಯಸಿಡ್ ಎರಚಿರುವ ಮಾಹಿತಿ ಇದೆ. ಸದ್ಯ ಮಹಿಳೆ ಆಸ್ಪತ್ರೆಯಲ್ಲಿ ಇದ್ದಾರೆ. ಪ್ರತ್ಯಕ್ಷದರ್ಶಿಗಳು ಹಾಗೂ ಮಹಿಳೆ ಹೇಳಿಕೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು' ಎಂದು ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.