ಬೆಂಗಳೂರು: ನಗರದಲ್ಲಿ ಒಂದು ವಾರದಿಂದ ಈರುಳ್ಳಿ ದರ ಗಣನೀಯ ಏರಿಕೆ ಕಂಡಿದ್ದು, ಪ್ರತಿ ಕೆ.ಜಿ.ಗೆ ₹100ರಿಂದ ₹110ರಂತೆ ಮಾರಾಟವಾಗುತ್ತಿದೆ.ದರ ಇಳಿಕೆಯಿಂದ ನಿಟ್ಟುಸಿರುಬಿಟ್ಟಿದ್ದ ಗ್ರಾಹಕರಿಗೆ ಈರುಳ್ಳಿ ಮತ್ತೆ ಜೇಬಿಗೆ ಕತ್ತರಿ ಹಾಕಿದೆ.
ದೇಶದೆಲ್ಲೆಡೆ ಈರುಳ್ಳಿ ಉತ್ಪಾದನೆ ಕಡಿಮೆಯಾಗಿದೆ. ಈಗ ಬೆಳೆದಿರುವ ಈರುಳ್ಳಿ ಮಾರುಕಟ್ಟೆಗೆ ಬರಲು ಕನಿಷ್ಠ ಎರಡು ತಿಂಗಳಾಗಬಹುದು. ಅಲ್ಲಿಯವರೆಗೆ ಈರುಳ್ಳಿ ದರ ₹100ರ ಆಸುಪಾಸಿನಲ್ಲೇ ಇರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
‘ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಈರುಳ್ಳಿ ಬೆಳೆ ಹಾನಿಯಾಗಿ, ಬೆಲೆ ಏರಿಕೆಯಾಗಿದೆ. ದೇಶದ ಈರುಳ್ಳಿಗೆ ವಿದೇಶಗಳಲ್ಲೂ ಬೇಡಿಕೆ ಇದೆ. ಹೀಗಾಗಿ ಈರುಳ್ಳಿ ಹೆಚ್ಚು ರಫ್ತಾಗುತ್ತಿದೆ.ಇದರಿಂದ ಮಾರುಕಟ್ಟೆಗೆ ಅಗತ್ಯ ಪ್ರಮಾಣದ ಈರುಳ್ಳಿ ಪೂರೈಕೆಯಾಗುತ್ತಿಲ್ಲ’ ಎನ್ನುತ್ತಾರೆ ಕೆ.ಆರ್.ಮಾರುಕಟ್ಟೆಯ ತರಕಾರಿ ವ್ಯಾಪಾರಿ ಸತೀಶ್.
ನುಗ್ಗೇಕಾಯಿ ದರ ಹೆಚ್ಚಳ: ಕೆ.ಆರ್.ಮಾರುಕಟ್ಟೆಯಲ್ಲಿ ಪ್ರತಿ ನುಗ್ಗೇಕಾಯಿ ₹20ರಿಂದ ₹30ರಂತೆ ಮಾರಾಟ ಆಗುತ್ತಿದೆ. ಹಾಪ್ಕಾಮ್ಸ್ನಲ್ಲಿ ನುಗ್ಗೇಕಾಯಿ ದರ ಪ್ರತಿ ಕೆ.ಜಿ.ಗೆ ₹330ರಷ್ಟಿದೆ.
'ಅಗತ್ಯ ಪ್ರಮಾಣದ ಈರುಳ್ಳಿ ದಾಸ್ತಾನು ಇಲ್ಲದ ಕಾರಣ ಬೆಲೆ ಹೆಚ್ಚಿದೆ. ಜನವರಿ ವೇಳೆಗೆ ದರ ಕಡಿಮೆಯಾಗಲಿದೆ.
-ಪ್ರಸನ್ನ, ತರಕಾರಿ ಸಗಟು ಮಾರುಕಟ್ಟೆ ವರ್ತಕರ ಸಂಘದ ಸಹ ಕಾರ್ಯದರ್ಶಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.