ADVERTISEMENT

ಜೈವಿಕ ಉದ್ಯಾನ: ಭಾನುವಾರ ಪ್ರವೇಶ ಮುಕ್ತ

​ಪ್ರಜಾವಾಣಿ ವಾರ್ತೆ
Published 31 ಜುಲೈ 2020, 21:58 IST
Last Updated 31 ಜುಲೈ 2020, 21:58 IST

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವು ಮೊದಲಿನಂತೆ ಭಾನುವಾರ ಸಹ ವೀಕ್ಷಣೆಗೆ ಮುಕ್ತವಾಗಿದೆ.

ಜುಲೈನಲ್ಲಿ ಪ್ರತಿ ಭಾನುವಾರ ಲಾಕ್‌ಡೌನ್‌ ಘೋಷಿಸಿದ್ದರಿಂದ, ಉದ್ಯಾನಕ್ಕೆ ಭಾನುವಾರ ರಜೆ ಘೋಷಿಸಲಾಗಿತ್ತು. ಮಂಗಳವಾರದಂದು ವೀಕ್ಷಕರ ವೀಕ್ಷಣೆಗೆ ತೆರೆಯಲಾಗಿತ್ತು.

‘ಭಾನುವಾರದ ಲಾಕ್‌ಡೌನ್‌ ಅನ್ನು ಹಿಂತೆಗೆದುಕೊಂಡಿರುವುದರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನ ಅಥವಾ ಮೃಗಾಲಯಕ್ಕೆ ಎಲ್ಲ ಭಾನುವಾರ ಸಹ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಿದೆ. ಮಂಗಳವಾರ ರಜೆ ಇರುತ್ತದೆ’ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.