ಬೆಂಗಳೂರು: ಸಾವಿರಾರು ಜನರನ್ನು ವಂಚಿಸಿರುವ ಐಎಂಎಗೆ ಸೇರಿದ ₹300 ಕೋಟಿಗೂ ಅಧಿಕ ಮೊತ್ತದ ಸ್ಥಿರ ಹಾಗೂ ಚರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದು, ಈಗ ಸುಮಾರು ₹21.73 ಕೋಟಿ ಮೊತ್ತದ ಆಸ್ತಿ ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇರುವ 17 ಆಸ್ತಿ ಮುಟ್ಟುಗೋಲಿಗೆ ಆದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸುದ್ದಿಗಾರರಿಗೆ ಬುಧವಾರ ತಿಳಿಸಿದರು.
ಐಎಂಎ ಮುಖ್ಯಸ್ಥರು, ಅದರ ಪಾಲುದಾರರು, ನಿರ್ದೇಶಕರು ಹಾಗೂ ಈ ಸಂಸ್ಥೆ ಜತೆ ಸಂಪರ್ಕ ಹೊಂದಿದ್ದು, ಜನರಿಗೆ ವಂಚಿಸಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಲಾಗಿದೆ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.