ADVERTISEMENT

₹100 ಕೋಟಿಗೂ ಹೆಚ್ಚು ಅನುದಾನಿತ ಕಾರ್ಯಕ್ರಮ- ಕಡ್ಡಾಯ ಮೌಲ್ಯಮಾಪನಕ್ಕೆ ಸಿಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 10:02 IST
Last Updated 20 ಜುಲೈ 2021, 10:02 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ಇನ್ನು ಮುಂದೆ ₹100 ಕೋಟಿಗಿಂತ ಹೆಚ್ಚು ಅನುದಾನವಿರುವ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮೌಲ್ಯಮಾಪನ ಮಾಡಲು ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಸಭೆಯ ಬಳಿಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.

ಕಳೆದ ಆಯವ್ಯಯ ಭಾಷಣದಲ್ಲಿ ಈ ವಿಷಯವನ್ನು ಘೋಷಿಸಲಾಗಿತ್ತು. ಮೌಲ್ಯಮಾಪನವನ್ನು ಕರ್ನಾಟಕ ಮೌಲ್ಯ ಮಾಪನ ಪ್ರಾಧಿಕಾರದಿಂದಲೇ ನಡೆಸಲಾಗುವುದು ಎಂದು ಹೇಳಿದರು.

ADVERTISEMENT

ಇಂದಿನ ಸಭೆಯಲ್ಲಿ 11 ಪ್ರಮುಖ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿಯ ಪರಿಶೀಲನೆ ನಡೆಸಲಾಯಿತು. 24 ವಿವಿಧ ಇಲಾಖೆಗಳಲ್ಲಿ 96 ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳು ಅನುಷ್ಠಾನದಲ್ಲಿವೆ. 2020–21 ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಒಟ್ಟು ಅನುದಾನ ₹39,601 ಕೋಟಿಗಳಾಗಿದ್ದು, ಇದರಲ್ಲಿ ಕೇಂದ್ರದ ಪಾಲು ₹18,715 ಕೋಟಿ ಇದ್ದು, 2021 ರ ಮಾರ್ಚ್‌ ಅಂತ್ಯಕ್ಕೆ ₹16,320 ಕೋಟಿ ಬಿಡುಗಡೆಯಾಗಿದೆ ಎಂದು ಹೇಳಿದರು.

2021–22 ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಒಟ್ಟು ಅನುದಾನ ₹38,078 ಕೋಟಿಗಳಾಗಿದ್ದು, ಇದರಲ್ಲಿ ಕೇಂದ್ರದ ಪಾಲು ₹17,536 ಕೋಟಿ ಆಗಿದ್ದು, ಜೂನ್‌ ಅಂತ್ಯಕ್ಕೆ ₹4074 ಕೋಟಿ ಬಿಡುಗಡೆಯಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.