ADVERTISEMENT

ಆಮ್ಲಜನಕ ಸಾಧನ ಮಾರಾಟ ಹೆಸರಿನಲ್ಲಿ ವಂಚನೆ

​ಪ್ರಜಾವಾಣಿ ವಾರ್ತೆ
Published 18 ಮೇ 2021, 15:23 IST
Last Updated 18 ಮೇ 2021, 15:23 IST

ಬೆಂಗಳೂರು: ಆಮ್ಲಜನಕ ಸಾಂದ್ರೀಕರಣ ಸಾಧನ ಮಾರಾಟ ಮಾಡುವುದಾಗಿ ಹೇಳಿ ಕೊರೊನಾ ಸೋಂಕಿತರೊಬ್ಬರ ಮಗನಿಂದ ₹ 30 ಸಾವಿರ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬನಶಂಕರಿ 3ನೇ ಹಂತದ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿಯೊಬ್ಬರು ವಂಚನೆ ಸಂಬಂಧ ದೂರು ನೀಡಿದ್ದಾರೆ.

‘ದೂರುದಾರರ ತಾಯಿಗೆ ಕೊರೊನಾ ಸೋಂಕು ತಗುಲಿತ್ತು. ಆಮ್ಲಜನಕಕ್ಕಾಗಿ ಸ್ನೇಹಿತರ ಬಳಿ ವಿಚಾರಿಸಿದ್ದರು. ಅವರಿಂದ ಆರೋಪಿಯ ಮೊಬೈಲ್ ನಂಬರ್ ಸಿಕ್ಕಿತ್ತು. ಆರೋಪಿಗೆ ಕರೆ ಮಾಡಿದಾಗ, ‘ಆಮ್ಲಜನಕ ಸಾಂದ್ರೀಕರಣ ಸಾಧನವಿದೆ. ಅದಕ್ಕೆ ₹ 30,000 ಮುಂಗಡ ಹಣ ನೀಡಬೇಕು’ ಎಂದಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ADVERTISEMENT

‘ಆರೋಪಿ ಮಾತು ನಂಬಿದ್ದ ದೂರುದಾರ ಹಣ ಪಾವತಿ ಮಾಡಿದ್ದರು. ಅದಾದ ನಂತರ ಆರೋಪಿ, ಯಾವುದೇ ಸಾಧನ ಕೊಟ್ಟಿಲ್ಲ. ಹಣವನ್ನೂ ವಾಪಸು ನೀಡದೇ ನಾಪತ್ತೆಯಾಗಿದ್ದಾನೆ’ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.