ಬೆಂಗಳೂರು: ಮಲ್ಟಿಪ್ಲೆಕ್ಸ್ ಸಮೂಹ ಸಂಸ್ಥೆಯು ಬೆಂಗಳೂರು ಕೇಂದ್ರ ಕಾರಾಗೃಹದ ಆರೋಗ್ಯ ಕೇಂದ್ರ ಹಾಗೂ ತುಮಕೂರು ಜಿಲ್ಲಾಡಳಿತಕ್ಕೆ ತಲಾ 5 ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಿದೆ.
ಕಾರಾಗೃಹ ಇಲಾಖೆಯ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೂಚನೆಯಂತೆ ಆರೋಗ್ಯ ಕೇಂದ್ರಕ್ಕೆ ಆಮ್ಲಜನಕ ಸಾಂದ್ರಕಗಳನ್ನು ಒದಗಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
‘ಕೋವಿಡ್ನಿಂದ ಸೃಷ್ಟಿಯಾಗಿರುವ ಈ ಬಿಕ್ಕಟ್ಟಿನ ಸಮಯದಲ್ಲಿ ಜನರ ಜೀವ ರಕ್ಷಿಸಲು ಆಮ್ಲಜನಕ ಸಾಂದ್ರಕಗಳು ಸಹಕಾರಿ.ಮಲ್ಟಿಪ್ಲೆಕ್ಸ್ ಸಂಸ್ಥೆ ಇವುಗಳನ್ನು ಒದಗಿಸಿರುವುದು ಸಂತಸದ ವಿಷಯ. ಈ ಸಂಸ್ಥೆಯ ಕಾರ್ಯ ಇತರರಿಗೂ ಮಾದರಿಯಾಗಲಿ’ ಎಂದು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ರಂಗನಾಥ್ ಹೇಳಿದರು.
ಕಾರಾಗೃಹ ಆರೋಗ್ಯ ಕೇಂದ್ರದ ಮುಖ್ಯ ಆರೋಗ್ಯಾಧಿಕಾರಿ ಡಾ.ಉಮಾ, ಅಧೀಕ್ಷಕರಾದ ಲತಾ, ವೈದ್ಯಾಧಿಕಾರಿ ಡಾ.ಸಂತೋಷ್, ಡಾ.ಪ್ರಮೀಳಾ, ಸಹಾಯಕ ಅಧೀಕ್ಷಕ ಪರಮೇಶ್, ಮಹದೇವನಾಯಕ್ ಹಾಗೂ ಶ್ರೀಶೈಲ ಮೇಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.