ಬೆಂಗಳೂರು: ಆಮ್ಲಜನಕ ಸಾಂದ್ರತೆ ಸಾಧನ, ಕೈಗವಸು ಹಾಗೂ ವಿವಿಧ ವೈದ್ಯಕೀಯ ಉಪಕರಣ ಮಾರಾಟದ ಹೆಸರಿನಲ್ಲಿ ₹ 2.97 ಲಕ್ಷ ವಂಚಿಸಲಾಗಿದ್ದು, ಈ ಸಂಬಂಧ ವೈಟ್ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚನ್ನಸಂದ್ರದ ಉದ್ಯಮಿಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ.
‘ವೈದ್ಯಕೀಯ ಉಪಕರಣ ಖರೀದಿಗಾಗಿ ದೂರುದಾರ ಆನ್ಲೈನ್ನಲ್ಲಿ ಹುಡುಕಾಡಿದ್ದರು. ಕಂಪನಿಯೊಂದರ ಮಾಹಿತಿ ಪಡೆದು ಉಪಕರಣಗಳಿಗೆ ಬೇಡಿಕೆ ಸಲ್ಲಿಸಿದ್ದರು. ಅದನ್ನು ತಿಳಿದ ವಂಚಕ, ಕಂಪನಿ ಹೆಸರಿನಲ್ಲಿ ದೂರುದಾರರಿಗೆ ಕರೆ ಮಾಡಿದ್ದ. ‘ಉಪಕರಣ ಬೇಕಾದರೆ ಮುಂಗಡ ಹಣ ಪಾವತಿಸಬೇಕು’ ಎಂದಿದ್ದ. ಅದನ್ನು ನಂಬಿದ್ದ ದೂರುದಾರ, ₹ 2.97 ಲಕ್ಷ ಪಾವತಿಸಿದ್ದರು. ನಂತರ, ಆರೋಪಿ ನಾಪತ್ತೆಯಾಗಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.