ADVERTISEMENT

ಅಧಿಕಾರಿಗಳಿಗೆ ಪೊಲೀಸರ ನೋಟಿಸ್

ಪರಮೇಶ್ವರ ಆಪ್ತ ಸಹಾಯಕ ರಮೇಶ್ ನಿಗೂಢ ಸಾವು ಪ್ರಕರಣ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2019, 20:16 IST
Last Updated 18 ಅಕ್ಟೋಬರ್ 2019, 20:16 IST

ಬೆಂಗಳೂರು: ಶಾಸಕ ಜಿ.ಪರಮೇಶ್ವರ ಅವರ ಆಪ್ತ ಸಹಾಯಕ ರಮೇಶ್ ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಜ್ಞಾನಭಾರತಿ ಠಾಣೆ ಪೊಲೀಸರು, ರಮೇಶ್ ಮನೆ ಮೇಲೆ ದಾಳಿ ನಡೆಸಿದ್ದ ಬಗ್ಗೆ ಮಾಹಿತಿ ನೀಡುವಂತೆ ಐ.ಟಿ ಅಧಿಕಾರಿಗಳಿಗೆ ನೋಟಿಸ್‌ ನೀಡಿದ್ದಾರೆ.

‘ಮೊನ್ನೆ ನನ್ನ ಮನೆಯಲ್ಲಿ ನಡೆದ ಐ.ಟಿ ದಾಳಿಯಿಂದ ನಾನು ದಿಗ್ಭ್ರಾಂತನಾಗಿದ್ದೇನೆ. ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂಬುದಾಗಿ ರಮೇಶ್ ಬರೆದಿದ್ದಾರೆ ಎನ್ನಲಾದ ಮರಣಪತ್ರವೂ ಪೊಲೀಸರಿಗೆ ಸಿಕ್ಕಿತ್ತು.

ಮರಣಪತ್ರದಲ್ಲಿರುವ ಅಂಶವನ್ನೇ ಉಲ್ಲೇಖಿಸಿ ಐ.ಟಿ ಅಧಿಕಾರಿಗಳಿಗೆ ನೋಟಿಸ್‌ ಕಳುಹಿಸಿರುವ ಪೊಲೀಸರು, ‘ರಮೇಶ್‌ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಯಾರು? ಅವರೇನಾದರೂ ರಮೇಶ್‌ಗೆ ಕಿರುಕುಳ ನೀಡಿದ್ದಾರೆಯೆ? ಹಾಗೂ ದಾಳಿಯ ವಿವರವನ್ನು ನೀಡಿ’ ಎಂದು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.