ದಾಬಸ್ಪೇಟೆ: ತ್ಯಾಮಗೊಂಡ್ಲು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೃಷ್ಣಕುಮಾರ್ ಶನಿವಾರಮುಸ್ಲಿಂಸಮುದಾಯದ ನಾಯಕರೊಂದಿಗೆಸಭೆನಡೆಸಿದರು.
‘ಶುಕ್ರವಾರದ ನಮಾಜ್ ಮಾಡಲು ಮಸೀದಿಗಳಲ್ಲಿ ಒಟ್ಟುಗೂಡಬಾರದು. ತಮ್ಮ ಮನೆಗಳಲ್ಲಿಯೇ ನಮಾಜ್ ಮಾಡಬೇಕು ಹಾಗೂ ಕೊರೊನಾ ಸೋಂಕಿನ ಸಂಬಂಧ ಆಶಾ ಕಾರ್ಯಕರ್ತೆಯರು, ಕಂದಾಯ, ಆರೋಗ್ಯ ಇಲಾಖೆಯ ಅಧಿಕಾರಿಗಳು ತಮ್ಮ ಮನೆಗಳ ಹತ್ತಿರ ಮಾಹಿತಿ ಕಲೆ ಹಾಕಲು ಬಂದಾಗ ಅವರಿಗೆ ಸಹಕರಿಸಬೇಕು. ಯಾವುದೇ ರೀತಿಯ ಗೊಂದಲ ಸೃಷ್ಟಿಸದಂತೆ ಸಮುದಾಯದ ಜನರಿಗೆ ತಿಳಿಸಬೇಕು’ ಎಂದು ಮುಖಂಡರಿಗೆ ತಿಳಿಸಿದರು. ಸುಮಾರು 20ಕ್ಕೂ ಹೆಚ್ಚುಮುಸ್ಲಿಂನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.