ಬೆಂಗಳೂರು: ಮಂಗಳವಾರ ರಾತ್ರಿ ಗುಂಪಿನೊಂದಿಗೆ ನಗರಕ್ಕೆ ಬಂದಿದ್ದ ನವೀಲೊಂದು ಅಪಘಾತದಲ್ಲಿ ಮೃತಪಟ್ಟಿದೆ.
ತುಮಕೂರು ರಸ್ತೆಯ ಪೀಣ್ಯ ಬಳಿಯ ಮೇಲ್ಸೇತುವೆಯಲ್ಲಿ ಅಪರಿಚಿತ ವಾಹನವೊಂದು ಗುದ್ದಿದ್ದರಿಂದಾಗಿ ನವಿಲು ಸ್ಥಳದಲ್ಲೇ ಮೃತಪಟ್ಟಿದೆ. ಈ ಸಂಬಂಧ ಪೀಣ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಮೇಲ್ಸೇತುವೆಯಲ್ಲೇ ನವಿಲು ಸತ್ತು ಬಿದ್ದಿತ್ತು. ಅದನ್ನು ಗಮನಿಸಿದ್ದ ಸ್ಥಳೀಯರು ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಜತೆಗೆ ಸ್ಥಳಕ್ಕೆ ಹೋಗಿ ನವೀಲನ್ನು ಸ್ಥಳಾಂತರಿಸಿದೆವು’ ಎಂದು ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.