ADVERTISEMENT

ಶೆಟ್ಟಿಹಳ್ಳಿ ವಾರ್ಡ್‌ಗೆ ಕಾವೇರಿ ನೀರಿನ ಸಂಪರ್ಕ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2018, 19:43 IST
Last Updated 26 ಡಿಸೆಂಬರ್ 2018, 19:43 IST
ಶೆಟ್ಟಿಹಳ್ಳಿ ವಾರ್ಡ್‌ನಲ್ಲಿ ಕಾವೇರಿ ನೀರಿನ ಸಂಪರ್ಕಕ್ಕೆ ಶಾಸಕ ಆರ್.ಮಂಜುನಾಥ್, ಪಾಲಿಕೆ ಸದಸ್ಯ ಕೆ.ನಾಗಭೂಷಣ್, ಕೆಪಿಸಿಸಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ಸ್ಥಳೀಯ ಮಹಿಳೆಯರಿಗೆ ಕೊಡದಲ್ಲಿ ನೀರನ್ನು ನೀಡುವ ಮೂಲಕ ಚಾಲನೆ ನೀಡಿದರು
ಶೆಟ್ಟಿಹಳ್ಳಿ ವಾರ್ಡ್‌ನಲ್ಲಿ ಕಾವೇರಿ ನೀರಿನ ಸಂಪರ್ಕಕ್ಕೆ ಶಾಸಕ ಆರ್.ಮಂಜುನಾಥ್, ಪಾಲಿಕೆ ಸದಸ್ಯ ಕೆ.ನಾಗಭೂಷಣ್, ಕೆಪಿಸಿಸಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ಸ್ಥಳೀಯ ಮಹಿಳೆಯರಿಗೆ ಕೊಡದಲ್ಲಿ ನೀರನ್ನು ನೀಡುವ ಮೂಲಕ ಚಾಲನೆ ನೀಡಿದರು   

ಬೆಂಗಳೂರು: ಪೀಣ್ಯದಾಸರಹಳ್ಳಿ ಸಮೀಪ ಶೆಟ್ಟಿಹಳ್ಳಿ ವಾರ್ಡ್‌ನಲ್ಲಿ ಮನೆಮನೆಗೆ ಕಾವೇರಿ ನೀರಿನ ಸಂಪರ್ಕ ಒದಗಿಸಲಾಯಿತು.

ಪಾಲಿಕೆ ಸದಸ್ಯ ಕೆ.ನಾಗಭೂಷಣ್ ಮಾತನಾಡಿ, '110 ಹಳ್ಳಿಗಳಿಗೆ ಈ ಯೋಜನೆ ರೂಪಿಸಿದ್ದು ನಮ್ಮ ವಾರ್ಡ್‌ನಲ್ಲಿ ಮೊದಲು ಚಾಲನೆ ನೀಡಿದ್ದೇವೆ. ಮುಂದೆ ಇಲ್ಲಿ ನೀರಿನ ಸಮಸ್ಯೆ ನಿವಾರಣೆಯಾಗಲಿದೆ' ಎಂದರು.

ಶಾಸಕ ಆರ್.ಮಂಜುನಾಥ್, 'ಕ್ಷೇತ್ರದ ಜನ ಯಾವುದೇ ಕೆಲಸ ಆಗಬೇಕಾದರೂ ಪಕ್ಷಾತೀತವಾಗಿ ಸಂಪರ್ಕಿಸಬಹುದು ಎಂದು ಅವರು ಹೇಳಿದರು. ಕೆಪಿಸಿಸಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ, ಅಬ್ಬಿಗೆರೆ ರಾಜಣ್ಣ, ಕೆ.ಸಿ.ವೆಂಕಟೇಶ್, ಕಾಂಗ್ರೆಸ್ ಮುಖಂಡ ಜೀಜು ವರ್ಗೀಸ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.