ADVERTISEMENT

ಪಿಎಸ್‌ಐ ಮುಖಕ್ಕೆ ಪೆಪ್ಪರ್ ಸ್ಪ್ರೇ: ರೌಡಿ ಬಂಧನ

​ಪ್ರಜಾವಾಣಿ ವಾರ್ತೆ
Published 15 ಜನವರಿ 2023, 23:39 IST
Last Updated 15 ಜನವರಿ 2023, 23:39 IST
   

ಬೆಂಗಳೂರು: ಬಂಧಿಸಲು ಹೋಗಿದ್ದ ಪಿಎಸ್‌ಐ ಹಾಗೂ ಹೆಡ್‌ ಕಾನ್‌ಸ್ಟೆಬಲ್ ಮುಖಕ್ಕೆ ಪೆಪ್ಪರ್ ಸ್ಪ್ರೇ ಎರಚಿ ಪರಾರಿಯಾಗಿದ್ದ ರೌಡಿ ಮನು ಅಲಿಯಾಸ್ ಜೆಡಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.

‘ಗೋವಿಂದರಾಜನಗರದ ಮನು, ಅಪರಾಧ ಹಿನ್ನೆಲೆಯುಳ್ಳವ. ಹಲವು ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಬಂದಿದ್ದ. ಈತನ ಹೆಸರು ರೌಡಿ ಪಟ್ಟಿಯಲ್ಲಿತ್ತು. ಇತ್ತೀಚೆಗೆ ಈತನನ್ನು ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ಹೇಳಿದರು.

‘2022ರಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿಯಾಗಿದ್ದ ಮನು, ತಲೆಮರೆಸಿಕೊಂಡು ಸುತ್ತಾಡುತ್ತಿದ್ದ. ಜ. 9ರಂದು ವಿಶ್ವೇಶ್ವರಯ್ಯ ಬಡಾವಣೆಯ ಮಂಗನಹಳ್ಳಿ ಕೆರೆ ಬಳಿ ಮನು ಅಡಗಿದ್ದ ಮಾಹಿತಿ ಸಿಕ್ಕಿತ್ತು. ‍ಪಿಎಸ್‌ಐ ಮೌನೇಶ್ ಬಡಗಿ, ಹೆಡ್ ಕಾನ್‌ಸ್ಟೆಬಲ್‌ಗಳಾದ ಕುಮಾರ್, ಮಹಾಲಿಂಗಯ್ಯ ಸ್ಥಳಕ್ಕೆ ಹೋಗಿದ್ದರು.’

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.