ADVERTISEMENT

ಮಾಧ್ಯಮ ನಿರ್ಬಂಧ ಕೋರಿ ಪಿಐಎಲ್

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2022, 19:16 IST
Last Updated 21 ಫೆಬ್ರುವರಿ 2022, 19:16 IST

ಬೆಂಗಳೂರು:ಹಿಜಾಬ್ ಧರಿಸಿ ಶಾಲೆ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರ ವಿಡಿಯೊ ಹಾಗೂ ಫೋಟೊ ತೆಗೆದು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ಕೋರಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ.

ಮುಖ್ಯ ನ್ಯಾಯಮೂರ್ತಿ ಋತು ರಾಜ್‌ ಅವಸ್ಥಿ ನೇತೃತ್ವದ ಸಾಂವಿಧಾನಿಕ ಪೀಠದ ಮುಂದೆ ಸೋಮವಾರ ವಿಚಾ ರಣೆಗೆ ಬಂದ ಈ ಅರ್ಜಿಗೆ ಪ್ರತಿಕ್ರಿಯಿಸಿದ ಪೀಠ,‘ಇದೇ ವಿಚಾರಕ್ಕೆ ಸಂಬಂಧಿಸಿದ ಅರ್ಜಿಗಳು ಪೂರ್ಣ ಪೀಠದ ಮುಂದಿದೆ. ಈ ಅರ್ಜಿಯೂ ಆಗಲೇ ವಿಚಾರಣೆಗೆ ಬರಲಿ’ ಎಂದು ತಿಳಿಸಿ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಅವರಿಗೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT