ಬೆಂಗಳೂರು: ರಾಜ್ಯದಲ್ಲಿ ಔಷಧಿ ಉತ್ಪಾದನಾ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಸಮೂಹ ಆಸಕ್ತಿ ವ್ಯಕ್ತಪಡಿಸಿದೆ. ಉದ್ಯಮ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಪಿರಮಲ್ ಸಮೂಹಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಪಿರಮಲ್ ಸಮೂಹದ ಅಧ್ಯಕ್ಷ ಆನಂದ್ ಪಿರಮಲ್ ಅವರೊಂದಿಗೆ ಮುಖ್ಯಮಂತ್ರಿ ಮಂಗಳವಾರ ವರ್ಚು ವಲ್ ಸಭೆ ನಡೆಸಿದರು. ರಾಜ್ಯದಲ್ಲಿ ಜಾರಿಗೊಳಿಸಿರುವ ಹೊಸ ಕೈಗಾರಿಕಾ ನೀತಿಯ ಕುರಿತು ವಿವರಿಸಿದ ಮುಖ್ಯಮಂತ್ರಿ, ಬೆಂಗಳೂರು ಮಾತ್ರವಲ್ಲದೇ ಬೇರೆ ಜಿಲ್ಲೆಗಳಲ್ಲೂ ಉದ್ಯಮ ಸ್ಥಾಪನೆಗೆ ಪ್ರೋತ್ಸಾಹ ನೀಡುವುದಾಗಿ ತಿಳಿಸಿದರು.
‘ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಒಂದೇ ದಿನದಲ್ಲಿ ಎಲ್ಲ ಅನುಮತಿಗಳನ್ನೂ ನೀಡಲಾಗುವುದು ಎಂಬ ವಿಚಾರ ತಿಳಿದು ನಾವು ಹೂಡಿಕೆಗೆ ಉತ್ಸುಕರಾಗಿದ್ದೇವೆ’ ಎಂದು ಆನಂದ್ ಪಿರಮಲ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.