ADVERTISEMENT

ಕೋವಿಡ್‌ನಿಂದ ಮೃತಪಟ್ಟ ಪೊಲೀಸರಿಗೆ ₹30 ಲಕ್ಷ ಪರಿಹಾರ: ಬಿ.ಎಸ್. ಯಡಿಯೂರಪ್ಪ

ಪೊಲೀಸ್ ಹುತಾತ್ಮ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2020, 4:28 IST
Last Updated 22 ಅಕ್ಟೋಬರ್ 2020, 4:28 IST
ಹುತಾತ್ಮರಿಗೆ ಗೌರವ ವಂದನೆ ಸಲ್ಲಿಸಿದ ಪೊಲೀಸರು ಪ್ರಜಾವಾಣಿ ಚಿತ್ರ
ಹುತಾತ್ಮರಿಗೆ ಗೌರವ ವಂದನೆ ಸಲ್ಲಿಸಿದ ಪೊಲೀಸರು ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಕೊರೊನಾ ಸೋಂಕು ಹರಡುತ್ತಿರುವ ನಡುವೆಯೂ ಪೊಲೀಸರು ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದಾರೆ. 85 ಮಂದಿ ಅಧಿಕಾರಿ–ಸಿಬ್ಬಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ₹30 ಲಕ್ಷ ಪರಿಹಾರ ದೊರೆಯಲಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಪೊಲೀಸ್ ಹುತಾತ್ಮ ದಿನಾಚರಣೆ ಅಂಗವಾಗಿ ನಗರ ಸಶಸ್ತ್ರ ಮೀಸಲು ಪಡೆಯ ಉದ್ಯಾನದಲ್ಲಿ ಬುಧವಾರ ಹುತಾತ್ಮ ಪೊಲೀಸರಿಗೆ ಗೌರವ ವಂದನೆ ಸಲ್ಲಿಸಿ ಮಾತನಾಡಿದ ಅವರು, ‘ಪೊಲೀಸರು ಲಾಕ್‌ಡೌನ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿದ್ದಾರೆ. ಬೆಂಗಳೂರಿನಲ್ಲಿ 345 ಸೇರಿ ರಾಜ್ಯದಾದ್ಯಂತ 580 ಚೆಕ್‌ಪೋಸ್ಟ್‌ ನಿರ್ಮಿಸಿ ಕೊರೊನಾ ನಿಯಂತ್ರಿಸಿದ್ದಾರೆ’ ಎಂದರು.

‘ರಾಜ್ಯದಲ್ಲಿ 8,900 ಪೊಲೀಸರು ಸೋಂಕಿತರಾಗಿದ್ದಾರೆ. ಇವರ ಕುಟುಂಬದ 500 ಮಂದಿ ಸದಸ್ಯರಿಗೂ ಸೋಂಕು ತಗುಲಿದೆ’ ಎಂದರು.

ADVERTISEMENT

ರಾಜ್ಯದ 17 ಮಂದಿ ಸೇರಿ ದೇಶದಾದ್ಯಂತ 264 ಮಂದಿ ಪೊಲೀಸ್ ಅಧಿಕಾರಿ-ಸಿಬ್ಬಂದಿ ಕರ್ತವ್ಯದ ವೇಳೆ ಮೃತಪಟ್ಟಿದ್ದಾರೆ ಎಂದು ಹೇಳಿದರು.

ಹುತಾತ್ಮರಾದ ಎಲ್ಲ ಅಧಿಕಾರಿ-ಸಿಬ್ಬಂದಿಗೆ ಗೌರವ ವಂದನೆ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.