ಬೆಂಗಳೂರು: ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಕ್ಕಳು ಹಾರಿ ಬಿಟ್ಟಿದ್ದ ಗಾಳಿಪಟದ ದಾರಕ್ಕೆ ಸಿಲುಕಿ ಒದ್ದಾಡುತ್ತಿದ್ದ ಕಾಗೆಯ ಪ್ರಾಣವನ್ನು ಸಂಚಾರ ವಿಭಾಗದ ಕಾನ್ಸ್ಟೆಬಲ್ ಉಳಿಸಿದ್ದು, ಅವರ ಮಾನವೀಯ ಕಾರ್ಯವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.
ದಾರಕ್ಕೆ ಸಿಲುಕಿದ ಕಾಗೆಯು ಜೀವನ್ಮರಣ ಸ್ಥಿತಿಯಲ್ಲಿತ್ತು. ಇದನ್ನು ಗಮನಿಸಿದ ಸುರೇಶ್, ಎತ್ತರದ ಕಂಬವ
ನ್ನೇರಿ ಕಾಗೆಯ ಪ್ರಾಣ ಉಳಿಸಿದ್ದಾರೆ. ಸಮವಸ್ತ್ರದಲ್ಲೇ ಮರ ಏರಿ ಕಾಗೆಯ ರಕ್ಷಣೆ ಮಾಡುತ್ತಿದ್ದ ವಿಡಿಯೊ ಜಾಲ
ತಾಣದಲ್ಲಿ ಹರಿದಾಡುತ್ತಿದೆ. ಇದನ್ನು ಗಮನಿಸಿದ ಶಾಸಕ ಸುರೇಶ್ ಕುಮಾರ್, ಸುರೇಶ್ ಅವರನ್ನು ಸನ್ಮಾನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.