ಬೆಂಗಳೂರು: ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ನಡೆಸಿದ ಗಲಭೆ ವೇಳೆ ಪೊಲೀಸರು ಹಾರಿಸಿದ್ದ ಗುಂಡೇಟಿನಿಂದ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಮೂಲಕ ಗುಂಡೇಟಿಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿದೆ.
ಮಂಗಳವಾರ ತಡರಾತ್ರಿ ಗಲಭೆ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು.
ಮೃತಪಟ್ಟವರನ್ನು ಡಿ.ಜೆ.ಹಳ್ಳಿ ನಿವಾಸಿಗಳಾದ ಯಾಸೀರ್ (19), ವಾಜಿದ್ (19) ಎಂದು ಗೊತ್ತಾಗಿದೆ. ಇನ್ನೊಬ್ಬ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದು ಆತನ ಹೆಸರು ಗೊತ್ತಾಗಿಲ್ಲ.
ಇನ್ನಷ್ಟು ಸುದ್ದಿ
ಡಿ.ಜೆ.ಹಳ್ಳಿ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಬಿಎಸ್ವೈ ಆದೇಶ
ಅವಹೇಳನಕಾರಿ ಪೋಸ್ಟ್: ಆರೋಪಿ ನವೀನ್ ಬಂಧನ
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ; ಪೊಲೀಸರಿಂದ ಗಾಳಿಯಲ್ಲಿ ಗುಂಡು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.