ಬೆಂಗಳೂರು: ನಗರದಲ್ಲಿ ಸೋಮವಾರ ಬೆಳ್ಳಂಬೆಳ್ಳಿಗೆ ಸರಗಳ್ಳರ ವಿರುದ್ಧಪೊಲೀಸ್ರಿವಾಲ್ವರ್ ಸದ್ದು ಮಾಡಿದೆ.
ನಗರದ ಹಲವೆಡೆ ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಖಚಿತ ಮಾಹಿತಿ ಆಧರಿಸಿದ ಪೊಲೀಸರು ನಂದಿನಿ ಲೇಔಟ್, ಬಾಗಲಗುಂಟೆ, ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ಇದೇ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಸೋಲದೇವನಹಳ್ಳಿಯ ಸಾಸಿವೆಘಟ್ಟ ಬಳಿ ಸುರೇಂದ್ರ ಸಿಂಗ್, ಕರಣ್ ಗುಪ್ತಾ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.