ADVERTISEMENT

ಉಲ್ಲಾಳದಲ್ಲಿ ಹೊಸ ಪೊಲೀಸ್ ಪರೇಡ್ ಮೈದಾನ

​ಪ್ರಜಾವಾಣಿ ವಾರ್ತೆ
Published 13 ಜೂನ್ 2020, 13:01 IST
Last Updated 13 ಜೂನ್ 2020, 13:01 IST
ಉಲ್ಲಾಳದಲ್ಲಿ ನಿರ್ಮಿಸಲಾಗುತ್ತಿರುವ ಪರೇಡ್‌ ಮೈದಾನ ಸ್ಥಳಕ್ಕೆ ಕಮಿಷನರ್ ಭಾಸ್ಕರ್ ರಾವ್ ಶನಿವಾರ ಭೇಟಿ ನೀಡಿದರು
ಉಲ್ಲಾಳದಲ್ಲಿ ನಿರ್ಮಿಸಲಾಗುತ್ತಿರುವ ಪರೇಡ್‌ ಮೈದಾನ ಸ್ಥಳಕ್ಕೆ ಕಮಿಷನರ್ ಭಾಸ್ಕರ್ ರಾವ್ ಶನಿವಾರ ಭೇಟಿ ನೀಡಿದರು   

ಬೆಂಗಳೂರು: ನಗರದ ಪಶ್ಚಿಮ ಸಶಸ್ತ್ರ ಮೀಸಲು ಪಡೆಗಾಗಿ (ಸಿಎಆರ್) ಉಲ್ಲಾಳದಲ್ಲಿ ಹೊಸ ಪರೇಡ್ ಮೈದಾನ ನಿರ್ಮಿಸಲಾಗುತ್ತಿದ್ದು, ಅದರ ಕೆಲಸ ಭರದಿಂದ ಸಾಗಿದೆ.

ಮೈದಾನದ ಸ್ಥಳಕ್ಕೆ ಶನಿವಾರ ಭೇಟಿ ನೀಡಿದ ಪೊಲೀಸ್ ಕಮಿಷರನ್ ಭಾಸ್ಕರ್ ರಾವ್, ಕಾಮಗಾರಿ ಬಗ್ಗೆ ಪರಿಶೀಲನೆ ನಡೆಸಿದರು. ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮೈದಾನ ನಿರ್ಮಾಣದ ರೂಪುರೇಷೆ ಬಗ್ಗೆ ಮಾಹಿತಿ ಹಂಚಿಕೊಂಡರು. ಸಿಎಆರ್ ಡಿಸಿಪಿ ಸಿದ್ದರಾಜು ಇದ್ದರು.

ಪೊಲೀಸ್ ಇಲಾಖೆಗೆ ಸೇರಿದ್ದ ಖಾಲಿ ಜಾಗದಲ್ಲಿ ಕಸ ಬೆಳೆದಿತ್ತು. ಜೆಸಿಬಿ ಯಂತ್ರದ ಸಹಾಯದಿಂದ ಕಸವನ್ನೆಲ್ಲ ತೆಗೆದು ಜಾಗವನ್ನು ಸಮತಟ್ಟಾಗಿ ಮಾಡುವ ಕೆಲಸ ನಡೆದಿದೆ. ಮೈದಾನ ನಿರ್ಮಾಣವಾದರೆ ಪೊಲೀಸರ ಪರೇಡ್ ಹಾಗೂ ಇಲಾಖೆಯು ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅನುಕೂಲವಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.