ADVERTISEMENT

‘112ಕ್ಕೆ ಕರೆ: 15 ನಿಮಿಷದಲ್ಲಿ ಸ್ಥಳಕ್ಕೆ ಪೊಲೀಸರು’

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 21:27 IST
Last Updated 3 ಅಕ್ಟೋಬರ್ 2022, 21:27 IST
   

ಬೆಂಗಳೂರು: ‘ನಗರದ ಜನರಿಗೆ ತುರ್ತು ಸಂದರ್ಭದಲ್ಲಿ ಸಹಾಯ ಮಾಡಲೆಂದು ಪೊಲೀಸ್ ಸಹಾಯವಾಣಿ–112 ಆರಂಭಿಸಲಾಗಿದ್ದು, ಈ ಸಂಖ್ಯೆಗೆ ಕರೆ ಮಾಡಿದರೆ 15 ನಿಮಿಷದೊಳಗೆ ಪೊಲೀಸರು ಸ್ಥಳದಲ್ಲಿ ಇರಲಿದ್ದಾರೆ’ ಎಂದು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ತಿಳಿಸಿದರು.

‘ಪೊಲೀಸ್ ಸಹಾಯವಾಣಿ– 112’ ಕುರಿತ ಜಾಗೃತಿ ವಾಹನ ಸಂಚಾರಕ್ಕೆ ಸೋಮವಾರ ಚಾಲನೆ ನೀಡಿದ ಪ್ರತಾಪ್ರೆಡ್ಡಿ, ‘ಅಕ್ಟೋಬರ್ 8ರವರೆಗೆ ನಗರದಲ್ಲಿ ವಾಹನ ಸಂಚರಿಸಲಿದೆ’ ಎಂದರು.

‘ನಗರದಲ್ಲಿ ಪೊಲೀಸರು ದಿನದ 24 ಗಂಟೆಯೂ ಕೆಲಸ ಮಾಡುತ್ತಿದ್ದಾರೆ. ನಗರದ ಯಾವುದೇ ಭಾಗದಿಂದ ಕರೆ ಮಾಡಿದರೂ ಪೊಲೀಸರು ಸ್ಥಳಕ್ಕೆ ಹೋಗಲಿದ್ದಾರೆ. ಈ ವ್ಯವಸ್ಥೆ ನಿರ್ವಹಣೆ ಜವಾಬ್ದಾರಿಯನ್ನು ಕಮಾಂಡೊ ಕೇಂದ್ರಕ್ಕೆ ವಹಿಸಲಾಗಿದೆ’ ಎಂದು ಕಮಿಷನರ್ ಹೇಳಿದರು.

ADVERTISEMENT

‘ಬಿಎಂಟಿಸಿ ನಿಲ್ದಾಣ, ತಂಗುದಾಣ, ಮಾರುಕಟ್ಟೆಗಳು, ಶಾಲಾ–ಕಾಲೇಜು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ 112 ಸಂಖ್ಯೆ ಜಾಗೃತಿ ಸ್ಟಿಕರ್‌ಗಳನ್ನು ಅಂಟಿಸಲಾಗುತ್ತಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.