ADVERTISEMENT

ರಸ್ತೆಯುದ್ದಕ್ಕೂ ಪೊಲೀಸ್ ಕಾವಲು: ನಿಯಂತ್ರಣದಲ್ಲಿ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 7:37 IST
Last Updated 12 ಆಗಸ್ಟ್ 2020, 7:37 IST
ಬೆಂಗಳೂರು ಗಲಭೆಯಲ್ಲಿ ಸುಟ್ಟು ಹೋಗಿರುವ ವಾಹನಗಳ ಬಳಿ ಪೊಲೀಸ್ ಸಿಬ್ಬಂದಿ
ಬೆಂಗಳೂರು ಗಲಭೆಯಲ್ಲಿ ಸುಟ್ಟು ಹೋಗಿರುವ ವಾಹನಗಳ ಬಳಿ ಪೊಲೀಸ್ ಸಿಬ್ಬಂದಿ   

ಬೆಂಗಳೂರು: ಗಲಭೆ ನಡೆದಿದ್ದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದ ರಸ್ತೆಯುದ್ದಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ‌. ಇಡೀ ಪ್ರದೇಶ ಪೊಲೀಸರ ನಿಯಂತ್ರಣದಲ್ಲಿ ಇದೆ.

ಕಿಡಿಗೇಡಿಗಳು ಸುಟ್ಟು ಹಾಕಿರುವ ವಾಹನಗಳನ್ನು ಪೊಲೀಸರು ರಸ್ತೆ ಬದಿಯಲ್ಲಿ ಹಾಕಿದ್ದಾರೆ. ಇಡೀ ಪ್ರದೇಶದಲ್ಲಿ ವಾಹನಗಳ ಓಡಾಟ ಮಿತಿಗೊಳಿಸಲಾಗಿದ್ದು, ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ‌.

ಠಾಣೆಯಲ್ಲೇ ಮೊಕ್ಕಾಂ, 137ಕ್ಕೆ ಏರಿದ ಬಂಧಿತರ ಸಂಖ್ಯೆ;
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಿರಿಯ ಅಧಿಕಾರಿಗಳು ಕೆ.ಜಿ.ಹಳ್ಳಿ ಠಾಣೆಯಲ್ಲೇ ಮೊಕ್ಕಾಂ ಹೂಡಿದ್ದಾರೆ.
ಗಳಭೆ ಸೃಷ್ಟಿಸಿದ ಆರೋಪಿಗಳ ಪತ್ತೆಗೆ ಶೋಧ ಮುಂದುವರಿದಿದೆ. ಇದುವರೆಗೂ 137 ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.