ADVERTISEMENT

ಪೊಲೀಸ್ ಅಧಿಕಾರಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2019, 19:44 IST
Last Updated 15 ಅಕ್ಟೋಬರ್ 2019, 19:44 IST

ಬೆಂಗಳೂರು: ಅನಾರೋಗ್ಯದಿಂದ ನೊಂದಿದ್ದ ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು ಮರಣಪತ್ರ ಬರೆದಿಟ್ಟುವಸತಿಗೃಹದ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸಹಾಯಕ ಆಡಳಿತಾಧಿಕಾರಿಯಾಗಿರುವ ಎ.ಎನ್. ಅಪ್ಪಚ್ಚು (53) ಆತ್ಮಹತ್ಯೆ ಮಾಡಿಕೊಂಡವರು.

‘ಚರ್ಮರೋಗ ಬಳಲುತ್ತಿದ್ದು, ಚಿಕಿತ್ಸೆ ಪಡೆಯಲು ಸಮಯ ಆಗುತ್ತಿಲ್ಲ. ಹೀಗಾಗಿ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಅಪ್ಪಚ್ಚು ಅವರು ಬರೆದಿಟ್ಟಿರುವ ಮರಣಪತ್ರ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ಅಪ್ಪಚ್ಚು ಅವರು ಆಡುಗೋಡಿ ಪೊಲೀಸ್ ವಸತಿಗೃಹದಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳ ಜತೆ ನೆಲೆಸಿದ್ದರು. ಮೂರು ದಿನಗಳಿಂದ ಅವರು ಮನೆಗೆ ಹೋಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.