ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಹೊರತುಪಡಿಸಿ ಉಳಿದೆಲ್ಲ ಪಟಾಕಿಗಳ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಇದೇ ಕಾರಣಕ್ಕೆ ರಾಮಮಂದಿರ ಮೈದಾನದಲ್ಲಿ ಹಾಕಲಾಗಿರುವ ಪಟಾಕಿಗಳ ಮಳಿಗೆಗಳಿಗೆ ರಾಜಾಜಿನಗರ ಠಾಣೆಯ ಪೊಲೀಸರು, ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಸಿರು ಪಟಾಕಿಗಳನ್ನು ಮಾರಾಟ ಮಾಡಲು ಮಳಿಗೆ ಮಾಲೀಕರಿಗೆ ಪರವಾನಗಿ ನೀಡಲಾಗಿದೆ. ಪೊಲೀಸರು ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಖುದ್ದು ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲನೆಯನ್ನೂ ಮಾಡಿದ್ದಾರೆ.
‘ಹೆಚ್ಚು ಹೊಗೆ ಹಾಗೂ ಶಬ್ದ ಬರುವ ಪಟಾಕಿಗಳನ್ನು ಕೆಲ ಮಳಿಗೆಗಳಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಹೀಗಾಗಿ, ಪೊಲೀಸರ ತಂಡಗಳು ಮಳಿಗೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ನಿಯಮ ಉಲ್ಲಂಘಿಸಿದ್ದ ಕೆಲ ವ್ಯಾಪಾರಿಗಳಿಗೆ ದಂಡವನ್ನೂ ವಿಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.