ADVERTISEMENT

ಪಟಾಕಿ ಮಳಿಗೆ ಪರಿಶೀಲನೆ ನಡೆಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 21:28 IST
Last Updated 14 ನವೆಂಬರ್ 2020, 21:28 IST
ಪಟಾಕಿ
ಪಟಾಕಿ   

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಹೊರತುಪಡಿಸಿ ಉಳಿದೆಲ್ಲ ಪಟಾಕಿಗಳ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಇದೇ ಕಾರಣಕ್ಕೆ ರಾಮಮಂದಿರ ಮೈದಾನದಲ್ಲಿ ಹಾಕಲಾಗಿರುವ ಪಟಾಕಿಗಳ ಮಳಿಗೆಗಳಿಗೆ ರಾಜಾಜಿನಗರ ಠಾಣೆಯ ಪೊಲೀಸರು, ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಸಿರು ಪಟಾಕಿಗಳನ್ನು ಮಾರಾಟ ಮಾಡಲು ಮಳಿಗೆ ಮಾಲೀಕರಿಗೆ ಪರವಾನಗಿ ನೀಡಲಾಗಿದೆ. ಪೊಲೀಸರು ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಖುದ್ದು ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲನೆಯನ್ನೂ ಮಾಡಿದ್ದಾರೆ.

‘ಹೆಚ್ಚು ಹೊಗೆ ಹಾಗೂ ಶಬ್ದ ಬರುವ ಪಟಾಕಿಗಳನ್ನು ಕೆಲ ಮಳಿಗೆಗಳಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಹೀಗಾಗಿ, ಪೊಲೀಸರ ತಂಡಗಳು ಮಳಿಗೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ನಿಯಮ ಉಲ್ಲಂಘಿಸಿದ್ದ ಕೆಲ ವ್ಯಾಪಾರಿಗಳಿಗೆ ದಂಡವನ್ನೂ ವಿಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.