ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ರಾಜ್ಯದ 8 ರಾಜಕೀಯ ಪಕ್ಷಗಳ ಮಾನ್ಯತೆ ರದ್ದುಪಡಿಸಿ, ರಾಜಕೀಯ ಪಕ್ಷಗಳ ಪಟ್ಟಿಯಿಂದ ಕೈಬಿಟ್ಟಿದೆ.
ಮಾನ್ಯತೆ ಕಳೆದುಕೊಂಡ ಪಕ್ಷಗಳು– ಇಂಡಿಯನ್ ವೋಟರ್ಸ್ ವೆಲ್ಫೇರ್ ಪಾರ್ಟಿ, ಕರ್ನಾಟಕ ಕ್ರಾಂತಿ ದಳ, ನವ ನಿರ್ಮಾಣ ನಾಗರಿಕ ಸಮಿತಿ, ರಾಷ್ಟ್ರೀಯ ಜನಾಂದೋಲನ ಪಕ್ಷ, ಸ್ವರ್ಣ ಯುಗ ಪಕ್ಷ, ಟಿಪ್ಪು ಸುಲ್ತಾನ್ ನ್ಯಾಷನಲ್ ಪಬ್ಲಿಕ್ ಪಾರ್ಟಿ, ಯುನೈಟೆಡ್ ಇಂಡಿಯನ್ ಡೆಮಾಕ್ರಟಿಕ್ ಕೌನ್ಸಿಲ್, ಅರಸ್ ಸಂಯುಕ್ತ ಪಕ್ಷ.
ಈ ಪಕ್ಷಗಳು ತಕರಾರುಗಳಿದ್ದಲ್ಲಿ 30 ದಿನಗಳೊಳಗಾಗಿ ಆಯೋಗದ ಕಚೇರಿ ಸಂಪರ್ಕಿಸಬಹುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.