ಬೆಂಗಳೂರು: ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ಇದೇ 27ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ವಿವಿಧ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
‘ಇಸ್ಕಾನ್ ಬಳಿಯ ಮಂತ್ರಿವಸತಿ ಸಮುಚ್ಚಯ, ತಲಘಟ್ಟಪುರ, ರಘುವನಹಳ್ಳಿ, ಗುಬ್ಲಾಳ, ಕುವೆಂಪುನಗರ, ವಿವಿ ನಗರ, ವಿವಿ ಬಡಾವಣೆ, ಬಾಲಾಜಿ ಲೇಔಟ್, ರಾಯಲ್ ಫಾರ್ಮ್, ಎಚ್ಎಸ್ಆರ್ ಬಡಾವಣೆಯ 7ನೇ ಸೆಕ್ಟರ್ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ’ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.