
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ, ಜಾಲಹಳ್ಳಿ ವಿಭಾಗದ ಉಪ ಕೇಂದ್ರದ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್ಮೆಂಟ್, ರಾಮಯ್ಯ ಲೇಔಟ್, ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ನಿಲ್ದಾಣ, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೊನಿ, ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್, ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಕೆಲವೆಡೆ, ತರಬನಹಳ್ಳಿ ಮುಖ್ಯರಸ್ತೆ, ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ವಿಶ್ವೇಶ್ವರಯ್ಯ ಲೇಔಟ್, ರಾಯಲ್ ಎನ್ಕ್ಲೇವ್, ಬೈರವೇಶ್ವರ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ರಾಜಾನುಕುಂಟೆ ಉಪ ಕೇಂದ್ರದ ವ್ಯಾಪ್ತಿಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೊನ್ನೇನಹಳ್ಳಿ, ಸಿಂಗ ನಾಯಕನಹಳ್ಳಿ, ರಾಜಾನುಕುಂಟೆ, ಅದ್ದೆವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲ್ಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಇಟಗಲ್ಪುರ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಳು, ಸೊನ್ನೇನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.