ADVERTISEMENT

ವಿದ್ಯುತ್ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 20:40 IST
Last Updated 29 ಸೆಪ್ಟೆಂಬರ್ 2020, 20:40 IST

ಬೆಂಗಳೂರು: ರಾಜರಾಜೇಶ್ವರಿನಗರ ವಿದ್ಯುತ್ ಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ಸೆ.30ರಿಂದ ಅ.6ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವ್ಯತ್ಯಯವಾಗುವ ಸ್ಥಳಗಳು: ಸೆ.30 ಮಣಿಪಾಲ್ ಆಸ್ಪತ್ರೆ, ಅ.1ರಂದು ಬಿಇಎಂಎಲ್ ಬಡಾವಣೆ ಮತ್ತು ರಾಜರಾಜೇಶ್ವರಿನಗರ, 5ರಂದು ಜೈನ್ ಬಡಾವಣೆ, ಚನ್ನಸಂದ್ರ, 6ರಂದು ಮಣಿಪಾಲ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
-----

ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

ADVERTISEMENT

ಬೆಂಗಳೂರು: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ಈ ಸಾಲಿನ 2ನೇ ವರ್ಷ ಮತ್ತು 3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಾತಿಗೆ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಪ್ರವೇಶಾತಿ ಪಡೆಯುವ ಅಭ್ಯರ್ಥಿಗಳು ಖುದ್ದಾಗಿ ಸಂಸ್ಥೆಗೆ ಭೇಟಿ ನೀಡಬೇಕು ಅಥವಾ ಸಮೀಪದ ಸರ್ಕಾರಿ, ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಅಕ್ಟೋಬರ್ 6ರೊಳಗೆ ಅರ್ಜಿ ಸಲ್ಲಿಸಬಹುದು.

ವಿವರಗಳಿಗೆ https://dtetech.karnataka.gov.in/kartechnical ಹಾಗೂ www.cetonline.karnataka.gov.in/kea ವೆಬ್‍ಸೈಟ್‍ಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸಂಪರ್ಕ:9686754592, 9844288324
---

ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ನಿಗಮದ ವೆಬ್‍ಸೈಟ್ www.dbcdc.karnataka.gov.inನಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ಅ.29 ಕೊನೆಯ ದಿನ.

ವಿಳಾಸ: ಕರ್ನಾಟಕ ಅಲೆಮಾರಿ/ಆರೆ ಅಲೆಮಾರಿ ಅಭಿವೃದ್ಧಿ ನಿಗಮ, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮುಖ್ಯರಸ್ತೆ, ಗಂಗಾನಗರ.

ಸಂಪರ್ಕ:080-23539600

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.