ADVERTISEMENT

ವಿದ್ಯುತ್‌ ವ್ಯತ್ಯಯ 8ರಿಂದ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 21:17 IST
Last Updated 4 ಮಾರ್ಚ್ 2021, 21:17 IST

ಬೆಂಗಳೂರು: ಜಯದೇವ ಉಪವಿಭಾಗ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಸುತ್ತ–ಮುತ್ತಲಿನ ಪ್ರದೇಶಗಳಲ್ಲಿ ಇದೇ 8ರಿಂದ 12ರವರೆಗೆ ಬೆಳಿಗ್ಗೆ 10.30ರಿಂದ ಸಂಜೆ 4ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ಬಿಟಿಎಂ ಬಡಾವಣೆಯ ಮೊದಲ ಮತ್ತು ಎರಡನೇ ಹಂತ, ಜೆ.ಪಿ. ನಗರ ಬಡಾವಣೆಯ 2, 3, 4 ಮತ್ತು 5ನೇ ಹಂತ. ದಾಲ್ಮಿಯಾ ಸಿಗ್ನಲ್, ಡಾಲರ್ಸ್‌ ಬಡಾವಣೆ, 100 ಅಡಿ ವರ್ತುಲ ರಸ್ತೆ, ಮದೀನಾ ನಗರ ಹಾಗೂ ಸುತ್ತ–ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT