ADVERTISEMENT

‘ಪ್ರಜಾವಾಣಿ’ ಜನಸ್ಪಂದನ ನಾಳೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2018, 19:30 IST
Last Updated 30 ಆಗಸ್ಟ್ 2018, 19:30 IST

ಬೆಂಗಳೂರು: ದಾಸರಹಳ್ಳಿವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್‌ಗಳ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಸೆಪ್ಟೆಂಬರ್‌ 1ರಂದು ‘ಜನಸ್ಪಂದನ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಹೆಸರಘಟ್ಟ ಮುಖ್ಯರಸ್ತೆಯ ಸಿದ್ಧೇಶ್ವರ ಬಡಾವಣೆಯ ಎನ್‌.ಎಂ.ಎಚ್‌ ಕನ್ವೆನ್‌ಷನ್‌ ಹಾಲ್‌ನಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಕಾರ್ಯಕ್ರಮ ನಡೆಯಲಿದೆ.

ಈ ಕ್ಷೇತ್ರದ ಶಾಸಕರು, ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನ ಸೆಳೆದು ಸ್ಥಳದಲ್ಲೇ ಪರಿಹಾರ ಪಡೆಯಲು ಸ್ಥಳೀಯರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೆಪ್ಟೆಂಬರ್‌ 1ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು.

ಕುಂದು ಕೊರತೆಗಳನ್ನು janaspandana@printersmysore.co.in ಗೆ ಇ–ಮೇಲ್‌ ಕೂಡ ಮಾಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.