ADVERTISEMENT

ಜಯನಗರ: ‘ಪ್ರಜಾವಾಣಿ’ ಜನಸ್ಪಂದನ 17ರಂದು

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2018, 18:49 IST
Last Updated 13 ನವೆಂಬರ್ 2018, 18:49 IST

ಬೆಂಗಳೂರು: ಜಯನಗರದ ಗತವೈಭದ ಬದಲಾಗುತ್ತಿದೆ ಎನಿಸುತ್ತಿದೆಯೇ? ಇಲ್ಲಿನ ಹಸಿರು ಕಣ್ಮರೆ ಆಗುತ್ತಿರುವುದು ಕಳವಳ ತಂದಿದೆಯೇ? ಕಸ ವಿಲೇವಾರಿ ಸಮಸ್ಯೆ ಇದೆಯೇ? ಸಂಚಾರ ಸಮಸ್ಯೆಯೇ?

ಹಾಗಾದರೆ, ನವೆಂಬರ್‌ 17ರಂದು ಜಯನಗರ 5ನೇ ‘ಟಿ‘ ಬ್ಲಾಕ್‌ನಲ್ಲಿರುವ ಜಿಎನ್‌ಆರ್‌ ಕಲ್ಯಾಣ ಮಂಟಪಕ್ಕೆ ಬನ್ನಿ. ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಕ್ಷೇತ್ರದ ಕುಂದುಕೊರತೆಗಳ ಕುರಿತ ನಿಮ್ಮ ಅಹವಾಲುಗಳನ್ನು ನೇರವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬಳಿ ಹೇಳಿಕೊಂಡು ಸ್ಥಳದಲ್ಲೇ ಪರಿಹಾರ ಪಡೆಯಬಹುದು.

ADVERTISEMENT

ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ, ಇಲ್ಲಿನ ಏಳು ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನ.17ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು.

ಕುಂದುಕೊರತೆಗಳನ್ನು ಮುಂಚಿತವಾಗಿ janaspandana@printersmysore.co.inಗೆ ಇ–ಮೇಲ್‌ ಮಾಡಬಹುದು. ಮಾಹಿತಿಗೆ: 94485 28998

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.