ADVERTISEMENT

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2018, 19:55 IST
Last Updated 22 ಸೆಪ್ಟೆಂಬರ್ 2018, 19:55 IST
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಕರ್ನಾಟಕ ಜನಸ್ಪಂದನ ಟ್ರಸ್ಟ್‌ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಯಿತು
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಕರ್ನಾಟಕ ಜನಸ್ಪಂದನ ಟ್ರಸ್ಟ್‌ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಯಿತು   

ಬೆಂಗಳೂರು: ಪೀಣ್ಯದಾಸರಹಳ್ಳಿ ಸಮೀಪ ಸಿದ್ದೇಶ್ವರ ಬಡಾವಣೆಯಲ್ಲಿ ಕರ್ನಾಟಕ ಜನಸ್ಪಂದನ ಟ್ರಸ್ಟ್‌ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ 85ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

‘ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳು ಮುಂದೆಯೂ ಕೂಡಾ ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗಕ್ಕೆ ಸೇರಿ ಸಮಾಜಕ್ಕೆ ಕೊಡುಗೆ ನೀಡಲಿ’ ಎಂದು ಟ್ರಸ್ಟ್‌ನ ಅಧ್ಯಕ್ಷ ಹನುಮಂತಪ್ಪ ಮೇಡೆಗಾರ ಶುಭಕೋರಿದರು.

ಕಾಂಗ್ರೆಸ್ ಮುಖಂಡ ಸೌಂದರ್ಯ ಪಿ.ಮಂಜಪ್ಪ, ಗೌರವಾಧ್ಯಕ್ಷ ಬಸವರಾಜ ಗಂಗನಹಳ್ಳಿ, ಪ್ರಧಾನ ಕಾರ್ಯದರ್ಶಿ ಎಂ.ಆರ್. ನದಾಫ್, ಮಹಿಳಾ ಘಟಕ ಅಧ್ಯಕ್ಷೆ ದಾಕ್ಷಾಯಿಣಿ ನಂದ್ಯಾಳ, ಪದಾಧಿಕಾರಿಗಳಾದ ಶಿಲ್ಪಾ ಮೇಡೆಗಾರ, ಬಸವರಾಜ, ಸುಭಾಷ್ ಸೋಲಂಕರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.