ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಡ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ರಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ನಡೆಯುವ 14ನೇ ಆವೃತ್ತಿಯ ಏರೋ ಇಂಡಿಯಾ ಶೊ ಉದ್ಘಾಟನೆಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡೆನು ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಒಟ್ಟು 98 ದೇಶಗಳ 811 ಪ್ರದರ್ಶಕರು ಭಾಗವಹಿಸಲಿದ್ದಾರೆ. ₹75 ಸಾವಿರ ಕೋಟಿ ವಹಿವಾಟಿನ 251 ರಕ್ಷಣಾ ಉಪಕರಣಗಳು, ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್ಗಳಿಗೆ ಸಂಬಂಧಿಸಿದ ಒಪ್ಪಂದಗಳಿಗೆ ವಿವಿಧ ಕಂಪನಿಗಳು ಸಹಿ ಹಾಕುವ ನಿರೀಕ್ಷೆ ಇದೆ.
ಫೆ.13ರಿಂದ 17ರವರೆಗೆ ಯಲಹಂಕ ವಾಯುನೆಲೆಯ ಒಟ್ಟು 35 ಸಾವಿರ ಚದರ ಮೀಟರ್ ಪ್ರದೇಶದಲ್ಲಿ ನಡೆಯಲಿರುವ ‘ಏರೋ ಇಂಡಿಯಾ–2023’ ಅನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ 9.30ಕ್ಕೆ ಉದ್ಘಾಟಿಸಲಿದ್ದಾರೆ.
1996ರಲ್ಲಿ ಆರಂಭವಾದ ವೈಮಾನಿಕ ಕ್ಷೇತ್ರದ ಶಕ್ತಿ ಪ್ರದರ್ಶನವು ದ್ವೈವಾರ್ಷಿಕವಾಗಿ ನಡೆಯುತ್ತಿದ್ದು, ಇದು 14ನೇ ಆವೃತ್ತಿ. ಏಷ್ಯಾದಲ್ಲೇ ಅತಿ ದೊಡ್ಡ ರಕ್ಷಣಾ ಮತ್ತು ವೈಮಾನಿಕ ಪ್ರದರ್ಶನ ಇದಾಗಿದ್ದು, ದೇಶದ ಯುದ್ಧ ವಿಮಾನಗಳು, ಹೆಲಿಕಾಪ್ಟರ್ ಗಳು, ರಕ್ಷಣಾ ಉಪಕರಣಗಳು ಮತ್ತು ವೈಮಾನಿಕ ಕ್ಷೇತ್ರದ ಸಾಧನೆಗಳನ್ನು ಬಿಂಬಿಸಲಿದೆ. ವೈಮಾನಿಕ ಕ್ಷೇತ್ರದ ಉದ್ಯಮದ ಸಾಮರ್ಥ್ಯ
ಗಳು, ಉತ್ಪನ್ನಗಳು ಮತ್ತು ಸೇವೆಗಳ ಪ್ರದರ್ಶನಕ್ಕೆ ಇದು ಅತಿ ದೊಡ್ಡ ವೇದಿಕೆಯಾಗಿದೆ.
32 ದೇಶಗಳ ರಕ್ಷಣಾ ಸಚಿವರು, ಜಾಗತಿಕ ಮತ್ತು ಭಾರತದ 73 ಪ್ರಮುಖ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಭಾಗವಹಿಸಲಿದ್ದು, ಮಹತ್ವದ ಚರ್ಚೆಗಳು ಮತ್ತು ಒಪ್ಪಂದಗಳು ನಡೆಯುವ ಸಾಧ್ಯತೆ ಇದೆ.
ಇವನ್ನೂ ಓದಿ..
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.