ಬೆಂಗಳೂರು: ಅಗ್ರಹಾರ ದಾಸರಹಳ್ಳಿಯ ಹಾವನೂರು ಪಬ್ಲಿಕ್ ಶಾಲೆಗೆ ನುಗ್ಗಿದ ದುಷ್ಕರ್ಮಿಗಳು, ವಿದ್ಯಾರ್ಥಿಗಳ ಎದುರೇ ಪ್ರಾಂಶುಪಾಲ ರಂಗನಾಥ್ ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದಾರೆ.
ಭಾನುವಾರ ಬೆಳಿಗ್ಗೆ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ರಂಗನಾಥ್ ಅವರು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ತೆಗೆದುಕೊಂಡಿದ್ದರು.ಏಕಾಏಕಿ ತರಗತಿಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು, ಚಾಕು ಇರಿದಿದ್ದಾರೆ.
ವಿದ್ಯಾರ್ಥಿಗಳ ಚೀರಾಟ ಕೇಳಿ ಸ್ಥಳೀಯರು ಶಾಲೆಗೆ ಬಂದು ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಮಾರ್ಗಮಧ್ಯೆಯೇ ರಂಗನಾಥ್ ಕೊನೆಯುಸಿರೆಳೆದಿದ್ದಾರೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಹಂತಕರು ಶಾಲೆಗೆ ನುಗ್ಗಿರುವ ಹಾಗೂ ಕೃತ್ಯ ಎಸಗಿ ಹೊರಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.