ಬೆಂಗಳೂರು: ಯಶವಂತಪುರದ ಆರ್ಎಂಸಿ ಯಾರ್ಡ್ ಬಳಿ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದಿದ್ದು, ಮಹಿಳಾ ಲೆಕ್ಕಾಧಿಕಾರಿ ವಿನುತಾ (32) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
‘ಕಾಮಾಕ್ಷಿಪಾಳ್ಯದ ಕಚೇರಿಯೊಂದ ರಲ್ಲಿ ವಿನುತಾ ಕೆಲಸ ಮಾಡುತ್ತಿದ್ದರು. ಮಂಗಳವಾರ ಬೆಳಿಗ್ಗೆ ದ್ವಿಚಕ್ರ ವಾಹನ
ದಲ್ಲಿ ಕಚೇರಿಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ನಂತರ ಬಸ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಯಶವಂತಪುರ ಸಂಚಾರ ಪೊಲೀಸರು ಹೇಳಿದರು.
‘ವಿನುತಾ ಪತಿ ಖಾಸಗಿ ಕಂಪನಿ ಉದ್ಯೋಗಿ. ದಂಪತಿಗೆ 11 ವರ್ಷದ
ಮಗನಿದ್ದಾನೆ. ವಿನುತಾ ಕಚೇರಿಗೆ ನಿತ್ಯವೂ ದ್ವಿಚಕ್ರ ವಾಹನದಲ್ಲಿ ಹೋಗಿ ಬರುತ್ತಿದ್ದರು’ ಎಂದು ತಿಳಿಸಿದರು.
ಚಾಲಕನ ಮೊಬೈಲ್ ಸ್ವಿಚ್ ಆಫ್: ‘ರಾಷ್ಟ್ರೀಯ ಹೆದ್ದಾರಿಯ ಆರ್.ಎಂ.ಸಿ ಯಾರ್ಡ್ ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದ ಬಸ್, ಉಜ್ಜಿಕೊಂಡು ಹೋಗಿತ್ತು. ವಿನುತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದರು.
‘ಲಕ್ಷ್ಮಿ ಹನುಮಾನ್ ಕಂಪನಿಗೆ ಸೇರಿದ್ದ ಬಸ್, ಮೆಜೆಸ್ಟಿಕ್ನಿಂದ ಪಾವಗಡಕ್ಕೆ ಹೊರಟಿತ್ತು. ಬಸ್ಸಿನಲ್ಲಿ ಪ್ರಯಾಣಿಕರೂ ಇದ್ದರು. ತಲೆಮರೆಸಿಕೊಂಡಿರುವ ಚಾಲಕ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಸದ್ಯ ಬಸ್ ಜಪ್ತಿ ಮಾಡಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.