ಬೆಂಗಳೂರು: ಐಎಫ್ಎಸ್ ಅಧಿಕಾರಿ, ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರಿಗೆ ಪಿಸಿಸಿಎಫ್ (ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ) ಹುದ್ದೆಗೆ ಬಡ್ತಿ ನೀಡಿ, ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ.
ವಿಜಯ್ ರಂಜನ್ ಸಿಂಗ್, ಪ್ರಾದೇಶಿಕ ಆಯುಕ್ತ ದೆಹಲಿ ಇವರಿಗೆ ಎಪಿಸಿಸಿಎಫ್ ಹುದ್ದೆಗೆ ಬಡ್ತಿ ನೀಡಲಾಗಿದೆ. ಆರ್.ರವಿಶಂಕರ್ ಅವರಿಗೆ
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಪ್ರಾಚಿ ಗಂಗ್ವಾರ್ಗೆ ಅರಣ್ಯ ಸಂರಕ್ಷಣಾಧಿಕಾರಿ, ಬಸವರಾಜ್ ಪಾಟೀಲರಿಗೆ ಮುಖ್ಯ ಅರಣ್ಯ
ಸಂರಕ್ಷಣಾಧಿಕಾರಿಯಾಗಿ ಬಡ್ತಿ ನೀಡಲಾಗಿದೆ.
ತಕತ್ ಸಿಂಗ್ ರಣಾವತ್, ಕೆ.ವಿ.ವಸಂತರೆಡ್ಡಿ, ಡಾ.ಮಾಲತಿ ರೆಡ್ಡಿ, ಡಾ.ರಮೇಶ್ಕುಮಾರ್, ಎಂ.ವಿ.ಅಮರ್ನಾಥ್, ಶಿವರಾಮಬಾಬು ಅವರಿಗೆ ಉಪ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಡಿಸಿಎಫ್) ಹುದ್ದೆಗೆ ಬಡ್ತಿ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.