ADVERTISEMENT

ಬಡ್ತಿ ಮೀಸಲಾತಿ ಕಾಯ್ದೆ ಜಾರಿ ತಂದರೆ ಚಳವಳಿ: ಅಹಿಂಸಾ

​ಪ್ರಜಾವಾಣಿ ವಾರ್ತೆ
Published 17 ಜನವರಿ 2019, 19:49 IST
Last Updated 17 ಜನವರಿ 2019, 19:49 IST
ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯವರಿಗೆ ಮನವಿ ಅರ್ಪಿಸಿದ ಅಹಿಂಸಾ ಪದಾಧಿಕಾರಿಗಳು
ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯವರಿಗೆ ಮನವಿ ಅರ್ಪಿಸಿದ ಅಹಿಂಸಾ ಪದಾಧಿಕಾರಿಗಳು   

ಬೆಂಗಳೂರು: ಸುಪ್ರೀಂಕೋರ್ಟ್‌ನ ಅಂತಿಮ ತೀರ್ಪು ಬರುವವರೆಗೆ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೊಳಿಸಬಾರದು ಎಂದು ಅಹಿಂಸಾ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ಸಾಮಾನ್ಯವರ್ಗ) ಪದಾಧಿಕಾರಿಗಳು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಅವರಿಗೆ ಮನವಿ ಸಲ್ಲಿಸಿದೆ.

ಕಾಯ್ದೆಯನ್ನು ಜಾರಿಗೊಳಿಸದೇ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ. ಅಲ್ಲದೆ, ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದ್ದು, ಎರಡು ದಿನಗಳಲ್ಲಿ ವಿಚಾರಣೆ ಮುಗಿಯುತ್ತದೆ. ಫೆಬ್ರುವರಿಯಲ್ಲಿ ತೀರ್ಪು ಪ್ರಕಟವಾಗುವ ನಿರೀಕ್ಷೆ ಇದೆ. ಅಲ್ಲಿಯವರೆಗೆ ಕಾಯಬೇಕು ಎಂದು ಅಹಿಂಸಾ ಅಧ್ಯಕ್ಷ ಎಂ.ನಾಗರಾಜ್‌ ಹೇಳಿದರು.

ಕೆಲವು ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ಸಚಿವರ ಒತ್ತಾಯಕ್ಕೆ ಮಣಿದು ಕಾಯ್ದೆ ಜಾರಿ ಮಾಡಿದರೆ, ರಾಜ್ಯಾದ್ಯಂತ ಹಾಲಿ ಮತ್ತು ನಿವೃತ್ತ ನೌಕರರು ಅಸಹಕಾರ ಚಳವಳಿ ಮಾಡಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡಿದರು.

ADVERTISEMENT

ಕಳೆದ 27 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದು, ಸುದೀರ್ಘ ಅವಧಿಯಲ್ಲಿ ಸಹಸ್ರಾರು ನೌಕರರು ಬಡ್ತಿಯಿಂದ ವಂಚಿತರಾಗಿದ್ದಾರೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.