ADVERTISEMENT

ಕನ್ನಡಾಭಿಮಾನಕ್ಕೆ ಪಹಲ್ಗಾಮ್ ಘಟನೆ ಹೋಲಿಕೆ ಪ್ರಕರಣ: ಸೋನು ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಮೇ 2025, 16:13 IST
Last Updated 3 ಮೇ 2025, 16:13 IST
ಸೋನು ನಿಗಮ್
ಸೋನು ನಿಗಮ್   

ಬೆಂಗಳೂರು: ಬಾಲಿವುಡ್ ಗಾಯಕ ಸೋನು ನಿಗಮ್ ಅವರು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡ ಸಂಘಟನೆ ಮುಖಂಡ ರೂಪೇಶ್ ರಾಜಣ್ಣ ಹಾಗೂ ಇತರೆ ಕಾರ್ಯಕರ್ತರು ಶನಿವಾರ ಕನ್ನಡ ಚಲನ ಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ವಾಣಿಜ್ಯ ಮಂಡಳಿಯ ಮುಖ್ಯಸ್ಥರನ್ನು ಭೇಟಿಯಾದ ಕಾರ್ಯಕರ್ತರು, ಸೋನು ನಿಗಮ್ ಅವರನ್ನು ಸ್ಯಾಂಡಲ್‌ವುಡ್‌ನಿಂದ ನಿಷೇಧಿಸಬೇಕು ಎಂದು ಒತ್ತಾಯಿಸಿದರು. ಜತೆಗೆ ಈ ಹಿಂದೆ ಉತ್ತರ ಭಾರತ ಸೋನು ನಿಗಮ್ ಅವರನ್ನು ನಿರ್ಲಕ್ಷ್ಯ ಮಾಡಿದಾಗ, ಕನ್ನಡಿಗರು ಪ್ರೀತಿ ಕೊಟ್ಟಿದ್ದಾರೆ. ಆದರೂ ಕನ್ನಡಿಗರನ್ನು ಭಯೋತ್ಫಾದಕರಿಗೆ ಹೊಲಿಕೆ ಮಾಡಿರುವುದು ಸರಿಯಲ್ಲ. ಆದ್ದರಿಂದ ಅವರನ್ನು ಕನ್ನಡ ಸಿನಿಮಾಗಳಿಂದ ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಸೋನು ನಿಗಮ್ ಅವರ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ರಾಜಾಜಿನಗರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಚೇರಿಯ ಮುಂಭಾಗ ಸೋನು ನಿಗಮ್ ವಿರುದ್ಧ ಪ್ರತಿಭಟನೆ ನಡೆಸಿದರು. ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಮಂಜುನಾಥ್, ರಘು ಜಾಣಗೆರೆ, ಸಂಘಟನಾ ಕಾರ್ಯದರ್ಶಿ ಎಲ್. ಜೀವನ್, ರಘು ನಂದನ್, ಎಲ್.ಜೀವನ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.