ಬೆಂಗಳೂರು: ‘ಪರಿಶಿಷ್ಟ ಪಂಗಡದ ಜನಸಂಖ್ಯೆಯ ಆಧಾರದ ಮೇಲೆ ರಾಜ್ಯ ಸರ್ಕಾರ ಶೇ 7.5ರಷ್ಟು ಮೀಸಲಾತಿ ಸೌಲಭ್ಯ ನೀಡಬೇಕು’ ಎಂದು ಒತ್ತಾಯಿಸಿಪರಿಶಿಷ್ಟ ಪಂಗಡ ಸಮುದಾಯ ಹೋರಾಟ ಸಮಿತಿಯು ಇದೇ25ರಂದು ನಗರದಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಸಿರಿಗೆರೆ ತಿಪ್ಪೇಶ್, ‘ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆಯು 60 ಲಕ್ಷಕ್ಕೂ ಹೆಚ್ಚು ಇದೆ. ನಮ್ಮ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಉದ್ಯೋಗದಿಂದಲೂ ವಂಚಿತರಾಗಿದ್ದಾರೆ. ಹಾಗಾಗಿ, ಪರಿಶಿಷ್ಟ ಪಂಗಡಕ್ಕೆ ಇರುವ ಶೇ 3ರ ಮೀಸಲಾತಿಯನ್ನು ಶೇ 7.5ಕ್ಕೆ ಏರಿಸಬೇಕು’ ಎಂದು ಒತ್ತಾಯಿಸಿದರು.
‘ಕೆಲ ಮುಂದುವರಿದ ವರ್ಗದವರು ಪರಿಶಿಷ್ಟ ಪಂಗಡದಲ್ಲಿರುವ ಹೆಸರು ಬಳಕೆ ಮಾಡಿಕೊಂಡು ತಹಶೀಲ್ದಾರ್ ಅವರಿಂದ ಅಸಂವಿಧಾನಾತ್ಮಕವಾಗಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಸೌಲಭ್ಯ ಪಡೆಯುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಇದರ ಬಗ್ಗೆ ಗಮನ ಹರಿಸಬೇಕು’ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.