ADVERTISEMENT

ಕೆ.ಆರ್.ಪುರ: ಚರಂಡಿ ಸ್ವಚ್ಛಗೊಳಿಸಿದ ಸಾರ್ವಜನಿಕರು

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2025, 15:36 IST
Last Updated 23 ಮಾರ್ಚ್ 2025, 15:36 IST
ಚರಂಡಿ ಕಸಕಡ್ಡಿಯಿಂದ ತುಂಬಿರುವುದು
ಚರಂಡಿ ಕಸಕಡ್ಡಿಯಿಂದ ತುಂಬಿರುವುದು   

ಕೆ.ಆರ್.ಪುರ: ರಾಮಮೂರ್ತಿನಗರ ವಾರ್ಡ್‌ನ ಕನಕನಗರದಲ್ಲಿ ಸಾರ್ವಜನಿಕರೆ ಚರಂಡಿ ಸ್ವಚ್ಛ ಮಾಡಿದರು.

ಚರಂಡಿಯಲ್ಲಿ ಹೂಳು, ಕಸ, ಕಡ್ಡಿ ತುಂಬಿಕೊಂಡಿದ್ದ ಕಾರಣ ಸಾರ್ವಜನಿಕರಿಗೆ ತೊಂದರೆ ಆಗಿತ್ತು. ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ನೀರು ಸರಾಗವಾಗಿ ಹರಿಯದೆ ಮನೆಗಳಿಗೆ ಕೊಳಚೆ ನೀರು ಹರಿಯಿತು. ಇದರಿಂದಾಗಿ ಜನರು ಹೈರಾಣಾಗಿದ್ದರು.

ಚರಂಡಿ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಲಿಲ್ಲ. ಇದರಿಂದ ಬೇಸತ್ತ ಸ್ಥಳೀಯರು ತಾವೇ ಹೂಳು ತೆಗೆದು ಚರಂಡಿ ಸ್ವಚ್ಛಗೊಳಿಸಿದರು.

ADVERTISEMENT

ಹಲವು ವರ್ಷಗಳಿಂದ ಚರಂಡಿ ಸ್ವಚ್ಛಗೊಳಿಸದ ಅಧಿಕಾರಿಗಳ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕರು ಚರಂಡಿ ಸ್ವಚ್ಛಗೊಳಿಸಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.