ADVERTISEMENT

ವೈದ್ಯರಿಗೆ ಬ್ಲ್ಯಾಕ್‌ಮೇಲ್ ಪ್ರಕರಣ: ಆರೋಪಿ ಪತ್ರಕರ್ತ ಕಶ್ಯಪ್‌ಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2019, 6:26 IST
Last Updated 24 ಮಾರ್ಚ್ 2019, 6:26 IST
ಹೇಮಂತ್ ಕಶ್ಯಪ್
ಹೇಮಂತ್ ಕಶ್ಯಪ್   

ಬೆಂಗಳೂರು: ವೈದ್ಯರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಡಿ ಬಂಧಿತನಾಗಿದ್ದ ಪತ್ರಕರ್ತ ಹೇಮಂತ್ ಕಶ್ಯಪ್‌ಗೆ ನಗರದ 7ನೇ ಎಸಿಎಂಎಂ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.

ಮಾರ್ಚ್ 19ರಂದು ಕಶ್ಯಪ್‌ನನ್ನು ಪೊಲೀಸರು ಬಂಧಿಸಿದ್ದರು.

ಶನಿವಾರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ‘ಘಟನೆಗೆ ಸಂಬಂಧಿಸಿದ ಸಾಕ್ಷ್ಯ ನಾಶ ಮಾಡಬಾರದು. ಪೊಲೀಸ್ ವಿಚಾರಣೆಗೆ ಸಹಕರಿಸಬೇಕು’ ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.