ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿ, ಬಸವನಗುಡಿ ಪೊಲೀಸ್ ಠಾಣೆ ಎದುರು ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಭಾನುವಾರ ರಾತ್ರಿ ಪ್ರತಿಭಟನೆ ನಡೆಸಿದರು.
ಪುನೀತ್ ಕೆರೆಹಳ್ಳಿ ಅವರು ದೂರು ನೀಡಲು ಠಾಣೆಗೆ ಬಂದಿದ್ದರು. ಇಲ್ಲಿ ದೂರು ಸ್ವೀಕರಿಸಲು ಸಾಧ್ಯವಿಲ್ಲ. ಸೈಬರ್ ಠಾಣೆಗೆ ತೆರಳುವಂತೆ ಪೊಲೀಸರು ಸೂಚಿಸಿದರು. ಇದರಿಂದ ಸಿಟ್ಟಿಗೆದ್ದ ಪುನೀತ್, ಠಾಣೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
‘ಹರಿಪ್ರಸಾದ್ ಅವರು ‘ಎಕ್ಸ್’ ಖಾತೆಯಲ್ಲಿ ನನ್ನ ಹೆಸರು ಹಾಕಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ’ ಎಂದು ಪುನೀತ್ ದೂರಿದರು.
‘ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ತನ್ನ ಸಹೋದರ ಸಂಘಟನೆಗಳಿಗೆ ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ’ ಎಂದು ‘ಎಕ್ಸ್’ ಖಾತೆಯಲ್ಲಿ ಹರಿಪ್ರಸಾದ್ ಬರೆದಿದ್ದರು. ಪುನೀತ್ ಕೆರೆಹಳ್ಳಿ ಹೆಸರು ಉಲ್ಲೇಖಿಸಿ, ಸ್ಕ್ರೀನ್ಶಾಟ್ವೊಂದನ್ನು ಪ್ರಕಟಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.