ADVERTISEMENT

ಸ್ನೇಹಿತರ ಗಲಾಟೆ: ಕೊಲೆಯಲ್ಲಿ ಅಂತ್ಯ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 16:10 IST
Last Updated 7 ಡಿಸೆಂಬರ್ 2022, 16:10 IST

ಬೆಂಗಳೂರು: ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಬಸವರಾಜ್ (25) ಎಂಬುವವರನ್ನು ಕೊಲೆ ಮಾಡಲಾಗಿದ್ದು, ಸ್ನೇಹಿತ ಅಭಿಜಿತ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

‘ಬಸವರಾಜ್ ಹಾಗೂ ಅಭಿಜಿತ್ ನಡುವೆ ಗಲಾಟೆ ಆಗಿತ್ತು. ಇದರಿಂದ ವೈಷಮ್ಯ ಬೆಳೆದಿತ್ತು. ಬಸವರಾಜ್ ಅವರನ್ನು ಕೊಲೆ ಮಾಡಿ ಅಭಿಜಿತ್ ಪರಾರಿಯಾಗಿದ್ದು, ಆತನ ಪತ್ತೆಗಾಗಿ ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಗಲಾಟೆಗೆ ಸಂಬಂಧಪಟ್ಟಂತೆ ಬಸವರಾಜ್ ಹಾಗೂ ಅಭಿಜಿತ್, ಕೆಲ ದಿನಗಳ ಹಿಂದೆ ಠಾಣೆ ಮೆಟ್ಟಿಲೇರಿದ್ದರು. ಇಬ್ಬರನ್ನೂ ಸಮಾಧಾನಪಡಿಸಿದ್ದ ಪೊಲೀಸರು, ಬುದ್ಧಿವಾದ ಹೇಳಿ ಕಳುಹಿಸಿದ್ದರು. ಮಂಗಳವಾರ ರಾತ್ರಿ ಇಬ್ಬರೂ ಪುನಃ ಒಂದೆಡೆ ಸೇರಿದ್ದರು. ಕುಡಿತ ಅಮಲಿನಲ್ಲಿದ್ದ ಅವರಿಬ್ಬರ ನಡುವೆ ಗಲಾಟೆ ಶುರುವಾಗಿತ್ತು. ಇದೇ ಸಂದರ್ಭದಲ್ಲೇ ಬಸವರಾಜ್ ಅವರನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.