ರಾಜರಾಜೇಶ್ವರಿನಗರ: ಗುಡಿಸಲಿನಿಂದ ಮುಕ್ತಿ ದೊರಕಿಸಿಕೊಟ್ಟು ನೆಮ್ಮದಿಯಿಂದ ವಾಸಿಸಲು ಬಡವರಿಗೆ 264 ಮನೆಗಳನ್ನು ನಿರ್ಮಿಸಿ ಹಸ್ತಾಂತರ ಮಾಡಲಾಗಿದೆ ಎಂದು ಬಿಬಿಎಂಪಿ ವಾರ್ಡ್ ಮಟ್ಟದ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಕೆ.ವೆಂಕಟೇಶ್ ತಿಳಿಸಿದರು.
ಬಿಬಿಎಂಪಿ ವತಿಯಿಂದ ₹18.60 ಕೋಟಿ ವೆಚ್ಚದಲ್ಲಿ ನಿರ್ವಿಸಿರುವ 264 ಮನೆಗಳ ಸ್ವಾಧೀನ ಪತ್ರಗಳನ್ನು ವಿತರಿಸಿ ಮಾತನಾಡಿ, ‘ಇನ್ನುಳಿದ 240 ಮನೆಗಳ ನಿರ್ಮಾಣ ಕಾಮಗಾರಿಗೆ ಅತಿ ಶೀಘ್ರದಲ್ಲಿ ಚಾಲನೆ ನೀಡಲಾಗುವುದು‘ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.