ADVERTISEMENT

ರಾಘವೇಶ್ವರ ಶ್ರೀಗಳ ವಿರುದ್ಧದ ಪ್ರಕರಣ: ಹಿಂದೆ ಸರಿದ 10ನೇ ನ್ಯಾಯಮೂರ್ತಿ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2019, 3:47 IST
Last Updated 30 ಆಗಸ್ಟ್ 2019, 3:47 IST
   

ಬೆಂಗಳೂರು:"ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಆಡಳಿತದಲ್ಲಿ ಶ್ರೀ ಮಠದಲ್ಲಿ ಆರ್ಥಿಕ ಅವ್ಯವಹಾರ ನಡೆದಿದ್ದು ಅವರನ್ನು ಪೀಠದಿಂದ ಕೆಳಗಿಳಿಸಬೇಕು" ಎಂದು ಕೋರಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಪಿ.ಎಂ.ನವಾಜ್ ಹಿಂದೆ ಸೇರಿದಿದ್ದಾರೆ.

ಇದರಿಂದಾಗಿ ರಾಘವೇಶ್ವರ ಶ್ರೀಗಳ ವಿರುದ್ಧದ ಒಟ್ಟು ಪ್ರಕರಣಗಳಲ್ಲಿ ಇದೀಗ ವಿಚಾರಣೆಯಿಂದ 10ನ್ಯಾಯಮೂರ್ತಿಗಳು ಹಿಂದೆ ಸರಿದಂತಾಗಿದೆ.

ಇಂದು (ಗುರುವಾರ) ಮಧ್ಯಾಹ್ನ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಪ್ರಕರಣ ವಿಚಾರಣೆಗೆ ನಿಗದಿಯಾಗಿತ್ತು. ವಿಚಾರಣೆಗೆ ಪ್ರಕರಣವನ್ನು ಕೂಗಿಸಿದಾಗ ನವಾಜ್ ಅವರು ತಾವು ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದರು.

ADVERTISEMENT

ಪ್ರಕರಣವನ್ನು ಬೇರೊಂದು ನ್ಯಾಯಪೀಠದ ಎದುರು ವಿಚಾರಣೆಗೆ ನಿಗದಿಪಡಿಸಲು ರಿಜಿಸ್ಟ್ರಾರ್ ಅವರಿಗೆ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.