ಬೆಂಗಳೂರು: ನಗರದಲ್ಲಿ ಗುರುವಾರ ಮೋಡ ಕವಿದ ವಾತಾವರಣವಿತ್ತು. ಆಗಾಗ ಬಿಸಿಲು ಕಾಣಿಸಿಕೊಂಡಿತು. ಸಂಜೆ ವೇಳೆ ಕೆಲವೆಡೆ ಸಾಧಾರಣ ಮಳೆಯೂ ಸುರಿಯಿತು.
ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ಬಸವೇಶ್ವರನಗರ ಹಾಗೂ ಸುತ್ತಮುತ್ತಲ ಸ್ಥಳಗಳಲ್ಲಿ ಮಳೆ ಆಯಿತು. ಜೋರಾಗಿ ಗಾಳಿಯೂ ಬಿಸಿ ಜನರಿಗೆ ತಂಪಿನ ಅನುಭವ ನೀಡಿತು.
ಬನಶಂಕರಿ, ಕೆಂಗೇರಿ, ಆರ್.ಟಿ.ನಗರ, ಸಂಜಯನಗರ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಕೆಲವು ಕಡೆ ಸ್ವಲ್ಪ ಪ್ರಮಾಣದಲ್ಲಿ ಮಳೆ ಹನಿಗಳು ಬಿದ್ದವು.
‘ಎರಡು ದಿನದಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಹಾನಿ ಬಗ್ಗೆ ದೂರುಗಳೂ ಬಂದಿಲ್ಲ’
ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.