ಬೆಂಗಳೂರು: ಗುದದ್ವಾರವಿಲ್ಲದೇ ಜನಿಸಿದ ಮಗುವಿಗೆ ಇಲ್ಲಿನ ರೈನ್ಬೋ ಮಕ್ಕಳ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಜನಿಸಿದ ಗಂಡು ಮಗುವಿಗೆ ಗುದದ್ವಾರ ಇರಲಿಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಬನ್ನೇರುಘಟ್ಟ ರಸ್ತೆಯ ರೈನ್ಬೋ ಮಕ್ಕಳ ಆಸ್ಪತ್ರೆಗೆ ಕರೆತರಲಾಯಿತು. ಮಕ್ಕಳ ಮೂತ್ರಶಾಸ್ತ್ರ ತಜ್ಞ ಡಾ.ಮುಕುಂದ ರಾಮಚಂದ್ರ ನೇತೃತ್ವದ ವೈದ್ಯರ ತಂಡ ತಪಾಸಣೆ ನಡೆಸಿ, ಶಸ್ತ್ರಚಿಕಿತ್ಸೆ ಮಾಡಿತು ಎಂದು ಆಸ್ಪತ್ರೆ ಹೇಳಿದೆ.
ಮಗುವಿಗೆ ಶಸ್ತ್ರಚಿಕಿತ್ಸೆ ನಡೆಸಿದ ಐದನೇ ದಿನಕ್ಕೆ ಹಾಲುಣಿಸಲು ಪ್ರಾರಂಭಿಸಲಾಯಿತು. ಏಳನೇ ದಿನದಂದು ಮನೆಗೆ ಕಳುಹಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.