ADVERTISEMENT

ಬೆಂಗಳೂರು: ರಾಜಭವನ ಚಲೋ ಇಂದು

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 5:22 IST
Last Updated 10 ಡಿಸೆಂಬರ್ 2020, 5:22 IST

ಬೆಂಗಳೂರು: ಭೂಸುಧಾರಣಾ ತಿದ್ದುಪಡಿ ಮಸೂದೆ ಹಿಂಪಡೆಯಲು ಒತ್ತಾಯಿಸಿ ಮತ್ತು ಯಾವುದೇ ತಿದ್ದುಪಡಿ ಕಾಯ್ದೆಗಳನ್ನು ತರಾತುರಿಯಲ್ಲಿ ಮಂಡಿಸಿದಂತೆ ಒತ್ತಾಯಿಸಿ ಗುರುವಾರ (ಡಿ.10) ರಾಜಭವನ ಚಲೋ ನಡೆಸಲು ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ನಿರ್ಧರಿಸಿದೆ.

ರೈತರು, ಕಾರ್ಮಿಕರ ವಿರೋಧ ಲೆಕ್ಕಿಸದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಯ್ದೆಗಳಿಗೆ ತಿದ್ದುಪಡಿ ತರಲು ಹೊರಟಿವೆ. ಇದನ್ನು ವಿರೋಧಿಸಿ ಗುರುವಾರ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ರಾಜ್ಯದ ಎಲ್ಲೆಡೆಯಿಂದ ರೈತರು, ಜನಪರ ಸಂಘಟನೆಗಳ ಕಾರ್ಯಕರ್ತರು ಬರಲಿದ್ದಾರೆ ಎಂದು ಸಮಿತಿ ತಿಳಿಸಿದೆ.

ಕಳೆದ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕಾರ ದೊರಕದಿದ್ದರೂ ಸುಗ್ರೀವಾಜ್ಞೆಗಳ ಮೂಲಕ ಜನರ ಮೇಲೆ ಕಾಯ್ದೆಗಳನ್ನು ಹೇರಲು ಸರ್ಕಾರ ಹೊರಟಿತ್ತು. ಈ ಅಧಿವೇಶನದಲ್ಲಿ ಮಸೂದೆಗಳನ್ನು ಮತ್ತೆ ಮಂಡಿಸಿದೆ. ರೈತರ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿ, ಮಸೂದೆಗಳನ್ನು ವಾಪಸ್ ಪಡೆಯದೇ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದೂ ಸಮಿತಿ ಎಚ್ಚರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.