ADVERTISEMENT

5ರಿಂದ ರಾಘವೇಶ್ವರ ಭಾರತೀ ಸ್ವಾಮೀಜಿ ಚಾತುರ್ಮಾಸ್ಯ

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 21:39 IST
Last Updated 2 ಜುಲೈ 2020, 21:39 IST
ರಾಘವೇಶ್ವರ ಭಾರತೀ ಸ್ವಾಮೀಜಿ
ರಾಘವೇಶ್ವರ ಭಾರತೀ ಸ್ವಾಮೀಜಿ   

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಯವರ 27ನೇ ಚಾತುರ್ಮಾಸ್ಯ ಜು.5ರಿಂದ ಸೆ.2ರವರೆಗೆ ಗೋಕರ್ಣದ ಅಶೋಕೆಯಲ್ಲಿ ನಡೆಯಲಿದೆ.

‘ಅರಿವಿನ ಹಣತೆ ಹಚ್ಚೋಣ- ವಿದ್ಯಾವಿಶ್ವ ಕಟ್ಟೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಬಾರಿ ವಿದ್ಯಾ ಚಾತುರ್ಮಾಸ್ಯವಾಗಿ ಆಚರಿಸಲಾಗು ತ್ತಿದೆ. ಕೊರೊನಾ ಸೋಂಕು ಹಿನ್ನೆಲೆ ಯಲ್ಲಿ ಭಿಕ್ಷಾಸೇವೆ ಹಾಗೂ ಪಾದಪೂಜೆ ಗಳಲ್ಲಿ ಬದಲಾವಣೆ ಮಾಡಲಾ ಗಿದೆ.ಚಾತುರ್ಮಾಸ್ಯ ವ್ರತಾರಂಭದ ದಿನ ನಡೆಯುವ ವ್ಯಾಸಪೂಜೆಗೆ ಸಮಿತಿ ಯಿಂದ ಅಧಿಕೃತ ಪತ್ರ ನೀಡಿದವರಿಗೆ ಮಾತ್ರ ಅವಕಾಶವಿರಲಿದೆ ಎಂದು ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ ತಿಳಿಸಿದ್ದಾರೆ.

ವ್ಯಾಸಪೂಜೆ, ದಿನನಿತ್ಯದ ಶ್ರೀಕರಾ ರ್ಚಿತ ಪೂಜೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ವೈಯಕ್ತಿಕ ಭೇಟಿಗೆ ಅವಕಾಶವಿಲ್ಲ. ಭಕ್ತರು ಆನ್‍ಲೈನ್ ಸೇವೆಗಳನ್ನು ಮಾಡಿಸಲು ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.

ADVERTISEMENT

ಸಂಪರ್ಕಕ್ಕೆ ಮೊ: 9448007828

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.